ಓದುಗರ ಪತ್ರ
ಮೈಸೂರಿನಲ್ಲಿ ಆಯುಧ ಪೂಜೆ ಮತ್ತು ದಸರಾ ಹಬ್ಬದ ಹಿನ್ನೆಲೆಯಲ್ಲಿ ಕುವೆಂಪುನಗರದ ಕಾಂಪ್ಲೆಕ್ಸ್ ಬಸ್ ನಿಲ್ದಾಣದ ಬಳಿ , ಜೆ.ಕೆ. ಮೈದಾನ ಇನ್ನೂ ಮುಂತಾದ ಕಡೆಗಳಲ್ಲಿ ಹೂವು, ಮಾವಿನ ಸೊಪ್ಪು, ಬಾಳೆಕಂದು, ಸೇವಂತಿಗೆ, ಚೆಂಡು ಹೂವು ಮಾರಾಟ ಮಾಡುವುದು ಕಂಡುಬಂತು. ಆದರೆ ಹಬ್ಬ ಮುಗಿಯುತ್ತಿದ್ದಂತೆ , ಮಾರಾಟವಾಗದ ಹೂವು, ಬಾಳೆ ಕಂದು, ಪ್ಲಾಸ್ಟಿಕ್ ಕವರ್ಗಳು ಹಾಗೂ ಚೀಲಗಳನ್ನು ರಸ್ತೆಯ ಅಕ್ಕ ಪಕ್ಕ ಹಾಗೂ ಫುಟ್ಪಾತ್ ಮೇಲೆ ಬಿಸಾಡಿ ಹೋಗುತ್ತಾರೆ.
ಇದನ್ನು ಸ್ವಚ್ಛ ಮಾಡಲು ಪೌರಕಾರ್ಮಿಕರು ಹರಸಾಹಸ ಪಡುವಂತಾಗಿದೆ. ಮುಂದಿನ ದಿನಗಳಲ್ಲಿ ದೀಪಾವಳಿ, ಸಂಕ್ರಾಂತಿ, ಶಿವರಾತ್ರಿ, ಯುಗಾದಿ ಹಬ್ಬಗಳಲ್ಲೂ ಇದೇ ಪುನರಾವರ್ತನೆಯಾಗುತ್ತದೆ. ಇದಕ್ಕೆ ಯಾರು ಹೊಣೆ? ಕೂಡಲೇ ನಗರ ಪಾಲಿಕೆ ಆಯುಕ್ತರು ಸಂಬಂಧಪಟ್ಟವರೊಡನೆ ಚರ್ಚಿಸಿ ರಸ್ತೆಬದಿಗಳಲ್ಲಿ ಹಬ್ಬದ ದಿನಗಳ ಪ್ರಯುಕ್ತ ವಿಶೇಷವಾಗಿ ವ್ಯಾಪಾರ ವಹಿವಾಟು ನಡೆಸುವವರಿಗೆ ಸ್ವಚ್ಛತೆ ಕಾಪಾಡಲು ಕೆಲವು ನಿಯಮಗಳೊಡನೆ ಷರತ್ತು ವಿಧಿಸುವುದರ ಜೊತೆಗೆ ವ್ಯಾಪಾರ ವಹಿವಾಟು ಮುಗಿದ ನಂತರ ಸಂಬಂಧಪಟ್ಟವರೇ ಎಲ್ಲಾ ವಸ್ತುಗಳನ್ನು ತೆರವುಗೊಳಿಸುವಂತೆ ಸೂಚಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…