ಓದುಗರ ಪತ್ರ
ಡಿ.13, 14 ರಂದು ಮೈಸೂರಿನಲ್ಲಿ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿತ್ತು.
ಮತದಾರರ ಪಟ್ಟಿಯ ಪರಿಶೀಲನೆಗಾಗಿ ಚಾಮುಂಡೇಶ್ವರಿ ಕ್ಷೇತ್ರ, ವಾರ್ಡ್ ನಂ. ೪೬ರ ಕನಕದಾಸನಗರ, ಜೆ.ಬ್ಲಾಕ್ನ ಮತಗಟ್ಟೆ ಸಂಖ್ಯೆ ೨೧೬ ಮತ್ತು ೨೧೭ ಹೊಂದಿರುವ ರೋಟರಿ ಶಾಲೆಗೆ ಡಿ.೧೪ರಂದು ಹೋದರೆ ಅಲ್ಲಿ ಗೇಟ್ಗೆ ಬೀಗ ಹಾಕಿತ್ತು.
ಸ್ವಚ್ಛತಾ ಕೆಲಸದ ಸಿಬ್ಬಂದಿಯೊಬ್ಬರನ್ನು ಕೇಳಿದಾಗ ಇಂದು ಶಾಲೆಗೆ ರಜೆ, ಯಾರೂ ಕೆಲಸ ನಿರ್ವಹಿಸುತ್ತಿಲ್ಲ. ನಾಳೆ ಬನ್ನಿ ಎಂದರು. ಈ ಸಂಬಂಧ ಮೈಸೂರು ಮಹಾ ನಗರಪಾಲಿಕೆ ಕಚೇರಿಯಲ್ಲಿ ವಿಚಾರಿಸಲು ಪಾಲಿಕೆ ಸಹಾಯವಾಣಿಗೆ ಕರೆ ಮಾಡಿದರೆ ಕರೆಯನ್ನು ಸ್ವೀಕರಿಸಲಿಲ್ಲ. ಇನ್ನಾದರೂ ಸಂಬಂಧಪಟ್ಟವರು ಮತದಾರರ ಪಟ್ಟಿ ಪರಿಶೀಲನೆ ಕುರಿತು ಸಾರ್ವಜನಿಕರಿಗೆ ಸರಿಯಾಗಿ ಮಾಹಿತಿ ನೀಡಬೇಕು ಹಾಗೂ ಚುನಾವಣಾ ಆಯೋಗ ನಿಗದಿಪಡಿಸಿದ ಸಮಯದಲ್ಲಿ ಆಯಾ ಸ್ಥಳದಲ್ಲಿದ್ದು, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವುದು ಅಗತ್ಯವಾಗಿದೆ.
-ಬಿ.ಎಂ.ಸುವರ್ಣ, ಕನಕದಾಸನಗರ, ಮೈಸೂರು
ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್ಮಂಗಲ…
ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…