ಓದುಗರ ಪತ್ರ
ಡಿ.13, 14 ರಂದು ಮೈಸೂರಿನಲ್ಲಿ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿತ್ತು.
ಮತದಾರರ ಪಟ್ಟಿಯ ಪರಿಶೀಲನೆಗಾಗಿ ಚಾಮುಂಡೇಶ್ವರಿ ಕ್ಷೇತ್ರ, ವಾರ್ಡ್ ನಂ. ೪೬ರ ಕನಕದಾಸನಗರ, ಜೆ.ಬ್ಲಾಕ್ನ ಮತಗಟ್ಟೆ ಸಂಖ್ಯೆ ೨೧೬ ಮತ್ತು ೨೧೭ ಹೊಂದಿರುವ ರೋಟರಿ ಶಾಲೆಗೆ ಡಿ.೧೪ರಂದು ಹೋದರೆ ಅಲ್ಲಿ ಗೇಟ್ಗೆ ಬೀಗ ಹಾಕಿತ್ತು.
ಸ್ವಚ್ಛತಾ ಕೆಲಸದ ಸಿಬ್ಬಂದಿಯೊಬ್ಬರನ್ನು ಕೇಳಿದಾಗ ಇಂದು ಶಾಲೆಗೆ ರಜೆ, ಯಾರೂ ಕೆಲಸ ನಿರ್ವಹಿಸುತ್ತಿಲ್ಲ. ನಾಳೆ ಬನ್ನಿ ಎಂದರು. ಈ ಸಂಬಂಧ ಮೈಸೂರು ಮಹಾ ನಗರಪಾಲಿಕೆ ಕಚೇರಿಯಲ್ಲಿ ವಿಚಾರಿಸಲು ಪಾಲಿಕೆ ಸಹಾಯವಾಣಿಗೆ ಕರೆ ಮಾಡಿದರೆ ಕರೆಯನ್ನು ಸ್ವೀಕರಿಸಲಿಲ್ಲ. ಇನ್ನಾದರೂ ಸಂಬಂಧಪಟ್ಟವರು ಮತದಾರರ ಪಟ್ಟಿ ಪರಿಶೀಲನೆ ಕುರಿತು ಸಾರ್ವಜನಿಕರಿಗೆ ಸರಿಯಾಗಿ ಮಾಹಿತಿ ನೀಡಬೇಕು ಹಾಗೂ ಚುನಾವಣಾ ಆಯೋಗ ನಿಗದಿಪಡಿಸಿದ ಸಮಯದಲ್ಲಿ ಆಯಾ ಸ್ಥಳದಲ್ಲಿದ್ದು, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವುದು ಅಗತ್ಯವಾಗಿದೆ.
-ಬಿ.ಎಂ.ಸುವರ್ಣ, ಕನಕದಾಸನಗರ, ಮೈಸೂರು
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…