ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ ಪ್ರತಿಷ್ಠೆಗಾಗಿ ನಡೆಸುತ್ತಿರುವ ಈ ಯುದ್ಧ ಸದ್ಯಕ್ಕಂತೂ ನಿಲ್ಲುವ ಸೂಚನೆಗಳು ಇಲ್ಲ. ಈ ಕಾರಣಕ್ಕಾಗಿಯೇ ಪ್ರಧಾನಿ ಮೋದಿ ಅವರು ಮುಂದಿನ ದಿನಗಳು ಕೋವಿಡ್ ದಿನಗಳ ಪರಿಸ್ಥಿತಿಗಿಂತಲೂ ಭೀಕರವಾಗಿರ ಬಹುದು, ದೇಶದ ಜನತೆ ಅದನ್ನು ಎದುರಿ ಸಲು ಸಿದ್ಧರಾಗಿರಬೇಕು ಎಂದು ಈಗಾಗಲೇ ಕರೆ ನೀಡಿದ್ದಾರೆ. ಅಲ್ಲದೆ ಕೆಲವು ಜಲತಾಣಗಳಲ್ಲಿ ದೇಶದಲ್ಲಿ ಲಾಕ್ಡೌನ್ ಜರಿಗೆ ಬರಬಹುದೆಂಬ ಸುದ್ದಿಯೂ ಹರಿದಾಡುತ್ತಿವೆ.
ಇಂದಿನ ಈ ಬಿಕ್ಕಟ್ಟುಗಳ ನಡುವೆ ಮಾ.೨೮ರಿಂದ ಐಪಿಎಲ್ ( ಇಂಡಿಯನ್ ಪ್ರೀಮಿಯರ್ ಲೀಗ್) ಎಂಬ ಹೆಸರಿನಲ್ಲಿ ಸಾವಿರಾರು ಕೋಟಿಗಳ ಶ್ರೀಮಂತರ ಜೂಜಿನ ಕ್ರಿಕೆಟ್ ಆರಂಭವಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಐಪಿಎಲ್ ಚಟಕ್ಕೆ ಬಿದ್ದು ಮನೆ – ಮಠ ಕಳೆದುಕೊಂಡವರಿದ್ದಾರೆ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲೂ ಐಪಿಎಲ್ನ ಅವಶ್ಯ ಏನಿದೆ? ಈ ಎಲ್ಲದರ ನಡುವೆ ಗುರುವಾರ ಮುಕ್ತಾಯಗೊಂಡ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಕೆಲವು ಶಾಸಕರು ನಮಗೆ ಐಪಿಎಲ್ ಫ್ರೀ ಪಾಸ್ ಕೊಡಿಸಿ ಎಂದು ಸಭಾಧ್ಯಕ್ಷರನ್ನು ಗೋಗರೆದಿರುವುದು ನಾಚಿಕೆಗೆಟ್ಟ ಸಂಗತಿ. ಪ್ರeವಂತ ನಾಗರಿಕರು ಈ ಸಲದ ಐಪಿಎಲ್ನ್ನು ರದ್ದುಪಡಿಸುವಂತೆ ಸರ್ಕಾರಕ್ಕೆ ಒತ್ತಡ ಹಾಕಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…
ಬೆಂಗಳೂರು: ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್ ಅಥವಾ ಪಾಸ್ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್ ಕುಮಾರ್…
ಕಠ್ಮಂಡು: ಕಳೆದ ವರ್ಷ ದೇಶದಾದ್ಯಂತ ನಡೆದಿದ್ದ ಜನರೇಷನ್ ಝಡ್ ಪ್ರತಿಭಟನೆಗೆ ಸಂಬಂಧಿಸಿದಂತೆ ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಹಾಗೂ…
ಮೇಲುಕೋಟೆ : ವಿಶ್ವವಿಖ್ಯಾತ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಕಿರೀಟಧಾರಣಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಪೂರ್ವಭಾವಿಯಾಗಿ, ಜಿಲ್ಲಾ ಖಜಾನೆಯಿಂದ…
ಎಚ್.ಡಿ.ಕೋಟೆ : ಪತಿ ಮೃತಪಟ್ಟ ಮಾರನೇ ದಿನವೇ ಶಿಕ್ಷಕಿಯೊಬ್ಬರು ಶಾಲೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಂಪಾಪುರ ಸಮೀಪದ…
ಹೊಸದಿಲ್ಲಿ : ಇರಾನ್ ಸಂಘರ್ಷದಿಂದಾಗಿ ಉಂಟಾದ ಅಂತರರಾಷ್ಟ್ರೀಯ ಅನಿಲ ಪೂರೈಕೆ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ವಾಣಿಜ್ಯ ಎಲ್ಪಿಜಿ ಪೂರೈಕೆಯನ್ನು…