ಓದುಗರ ಪತ್ರ
ಬೆಳಕಿನ ಹಬ್ಬ ದೀಪಾವಳಿಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪರಿಸರ ಸ್ನೇಹಿ‘ ಹಸಿರು ಪಟಾಕಿ’ ಗಳನ್ನು ಮಾತ್ರ ಮಾರಾಟ ಮಾಡುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ. ಆದರೆ ಇದು ಕಟ್ಟು ನಿಟ್ಟಾಗಿ ಜಾರಿಗೆ ಬಂದಿದೆಯೇ ಎಂಬ ಅನುಮಾನವಿದೆ.
ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದ ಹೋಲ್ ಸೇಲ್ ಅಂಗಡಿಗಳಿಗೆ ಪಟಾಕಿತರಲು ಹೋಗಿದ್ದಾಗ ಅಲ್ಲಿನ ಅಂಗಡಿಯವರನ್ನು ‘ಹಸಿರು ಪಟಾಕಿ’ ಕೊಡಿ ಎಂದರೆ, ಅಂಗಡಿಗಳಲ್ಲಿ ಇರುವುದೆಲ್ಲವೂ ಹಸಿರು ಪಟಾಕಿ ಗಳೇ ಎಂದು ಹೇಳಿದರು.
ಹಸಿರು ಪಟಾಕಿ ಎಂದರೆ ಪಟಾಕಿಗಳಿಗೆ ಹಸಿರು ಬಣ್ಣದ ಕಾಗದವನ್ನು ಅಂಟಿಸಿರುತ್ತಾರೆಯೇ ಹೊರತು ಹೆಚ್ಚಿನ ವ್ಯತ್ಯಾಸ ಕಾಣುವುದಿಲ್ಲ. ಹಾಗಿದ್ದರೆ ಹಸಿರು ಪಟಾಕಿಗಳು ಎಂದರೆ ಯಾವುದು? ಹಸಿರು ಪಟಾಕಿಗಳಾಗಿದ್ದರೆ ಅದಕ್ಕೆ ಬಾಕ್ಸ್ ಮೇಲೆ ಲೇಬಲ್ ಹಾಕ ಬೇಕಲ್ಲವೇ? ಸಾರ್ವಜನಿಕರಿಗೆ ಹಸಿರು ಪಟಾಕಿ ಯಾವುದು ಮಾಮೂಲಿ ಪಟಾಕಿ ಯಾವುದು ಎಂಬುದೇ ತಿಳಿಯುತ್ತಿಲ್ಲ. ಸರ್ಕಾರದ ಆದೇಶ ಕಾಗದದ ಮೇಲಷ್ಟೇ ಉಳಿಯುತ್ತದೆ, ಮಾಮೂಲಿನಂತೆ ಯಾರ ಭಯವೂ ಇಲ್ಲದೆ ಪಟಾಕಿ ವ್ಯಾಪಾರ ವಹಿವಾಟುಗಳು ಪಡೆಯುತ್ತಿವೆ, ಇದನ್ನು ನಿಯಂತ್ರಿಸುವವರು ಯಾರು ?
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ , ಮೈಸೂರು
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…
ಬೆಂಗಳೂರು: ಜನವರಿ.22ರಿಂದ ಜನವರಿ.31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ…