ಓದುಗರ ಪತ್ರ
ಬೆಳಕಿನ ಹಬ್ಬ ದೀಪಾವಳಿಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪರಿಸರ ಸ್ನೇಹಿ‘ ಹಸಿರು ಪಟಾಕಿ’ ಗಳನ್ನು ಮಾತ್ರ ಮಾರಾಟ ಮಾಡುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ. ಆದರೆ ಇದು ಕಟ್ಟು ನಿಟ್ಟಾಗಿ ಜಾರಿಗೆ ಬಂದಿದೆಯೇ ಎಂಬ ಅನುಮಾನವಿದೆ.
ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದ ಹೋಲ್ ಸೇಲ್ ಅಂಗಡಿಗಳಿಗೆ ಪಟಾಕಿತರಲು ಹೋಗಿದ್ದಾಗ ಅಲ್ಲಿನ ಅಂಗಡಿಯವರನ್ನು ‘ಹಸಿರು ಪಟಾಕಿ’ ಕೊಡಿ ಎಂದರೆ, ಅಂಗಡಿಗಳಲ್ಲಿ ಇರುವುದೆಲ್ಲವೂ ಹಸಿರು ಪಟಾಕಿ ಗಳೇ ಎಂದು ಹೇಳಿದರು.
ಹಸಿರು ಪಟಾಕಿ ಎಂದರೆ ಪಟಾಕಿಗಳಿಗೆ ಹಸಿರು ಬಣ್ಣದ ಕಾಗದವನ್ನು ಅಂಟಿಸಿರುತ್ತಾರೆಯೇ ಹೊರತು ಹೆಚ್ಚಿನ ವ್ಯತ್ಯಾಸ ಕಾಣುವುದಿಲ್ಲ. ಹಾಗಿದ್ದರೆ ಹಸಿರು ಪಟಾಕಿಗಳು ಎಂದರೆ ಯಾವುದು? ಹಸಿರು ಪಟಾಕಿಗಳಾಗಿದ್ದರೆ ಅದಕ್ಕೆ ಬಾಕ್ಸ್ ಮೇಲೆ ಲೇಬಲ್ ಹಾಕ ಬೇಕಲ್ಲವೇ? ಸಾರ್ವಜನಿಕರಿಗೆ ಹಸಿರು ಪಟಾಕಿ ಯಾವುದು ಮಾಮೂಲಿ ಪಟಾಕಿ ಯಾವುದು ಎಂಬುದೇ ತಿಳಿಯುತ್ತಿಲ್ಲ. ಸರ್ಕಾರದ ಆದೇಶ ಕಾಗದದ ಮೇಲಷ್ಟೇ ಉಳಿಯುತ್ತದೆ, ಮಾಮೂಲಿನಂತೆ ಯಾರ ಭಯವೂ ಇಲ್ಲದೆ ಪಟಾಕಿ ವ್ಯಾಪಾರ ವಹಿವಾಟುಗಳು ಪಡೆಯುತ್ತಿವೆ, ಇದನ್ನು ನಿಯಂತ್ರಿಸುವವರು ಯಾರು ?
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ , ಮೈಸೂರು
ಬೆಂಗಳೂರು: ಆರ್ಎಸ್ಎಸ್ ಮುಗಿಸುತ್ತೇವೆ ಎನ್ನುವವರು ಭ್ರಮೆಯಲ್ಲಿದ್ದಾರೆ. ನಮ್ಮ ಸಂಘಟನೆಯನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂಬ ಕೇಂದ್ರದ ಮಾಜಿ ಸಚಿವ ಅನಂತ್…
ಚಾಮರಾಜನಗರ: ಗಡಿ ಜಿಲ್ಲೆ ಹಾಗೂ ಹುಲಿಗಳ ನಾಡು ಎಂದೇ ಪ್ರಸಿದ್ಧಿ ಪಡೆದಿರುವ ಚಾಮರಾಜನಗರದಲ್ಲಿ ಕಾಡು ಪ್ರಾಣಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿವೆ.…
ಬೆಂಗಳೂರು: ಮಾರ್ಚ್.6ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಇಂದಿನಿಂದ ಬಜೆಟ್ ಅಧಿವೇಶನ ಶುರುವಾಗಲಿದೆ. ಬಜೆಟ್ ಮೇಲಿನ ಕುರಿತು…
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದ ಕಾರ್ಮೋದ ಮತ್ತಷ್ಟು ಹೆಚ್ಚಾಗಿದ್ದು, ಇದರ ಪರಿಣಾಮ ಸಿಲಿಕಾನ್ ಸಿಟಿ ಬೆಂಗಳೂರಿನ ವಿಮಾನಯಾನದ ಮೇಲೆ ಬೀರಿದೆ.…
ಹದಿನೇಳನೇ ಬಾರಿಗೆ ರಾಜ್ಯದ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿರುವ ವಿತ್ತ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅದರ…
ಪಕ್ಷಕ್ಕೆ ಬಹುಮತ ಬಂದರೆ ಸಿಎಂ, ಬರದಿದ್ದರೆ ಪ್ರತಿಪಕ್ಷ ನಾಯಕರಾಗುವ ಪ್ರಭಾವಿ ವ್ಯಕ್ತಿ ವೇಗವಾಗಿ ಸಾಗುತ್ತಿದ್ದ ಜೀಪು ಸಂಗನಕಲ್ಲು ಕ್ರಾಸ್ ಬಳಿ…