ಓದುಗರ ಪತ್ರ
ಬೆಳಕಿನ ಹಬ್ಬ ದೀಪಾವಳಿಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪರಿಸರ ಸ್ನೇಹಿ‘ ಹಸಿರು ಪಟಾಕಿ’ ಗಳನ್ನು ಮಾತ್ರ ಮಾರಾಟ ಮಾಡುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ. ಆದರೆ ಇದು ಕಟ್ಟು ನಿಟ್ಟಾಗಿ ಜಾರಿಗೆ ಬಂದಿದೆಯೇ ಎಂಬ ಅನುಮಾನವಿದೆ.
ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದ ಹೋಲ್ ಸೇಲ್ ಅಂಗಡಿಗಳಿಗೆ ಪಟಾಕಿತರಲು ಹೋಗಿದ್ದಾಗ ಅಲ್ಲಿನ ಅಂಗಡಿಯವರನ್ನು ‘ಹಸಿರು ಪಟಾಕಿ’ ಕೊಡಿ ಎಂದರೆ, ಅಂಗಡಿಗಳಲ್ಲಿ ಇರುವುದೆಲ್ಲವೂ ಹಸಿರು ಪಟಾಕಿ ಗಳೇ ಎಂದು ಹೇಳಿದರು.
ಹಸಿರು ಪಟಾಕಿ ಎಂದರೆ ಪಟಾಕಿಗಳಿಗೆ ಹಸಿರು ಬಣ್ಣದ ಕಾಗದವನ್ನು ಅಂಟಿಸಿರುತ್ತಾರೆಯೇ ಹೊರತು ಹೆಚ್ಚಿನ ವ್ಯತ್ಯಾಸ ಕಾಣುವುದಿಲ್ಲ. ಹಾಗಿದ್ದರೆ ಹಸಿರು ಪಟಾಕಿಗಳು ಎಂದರೆ ಯಾವುದು? ಹಸಿರು ಪಟಾಕಿಗಳಾಗಿದ್ದರೆ ಅದಕ್ಕೆ ಬಾಕ್ಸ್ ಮೇಲೆ ಲೇಬಲ್ ಹಾಕ ಬೇಕಲ್ಲವೇ? ಸಾರ್ವಜನಿಕರಿಗೆ ಹಸಿರು ಪಟಾಕಿ ಯಾವುದು ಮಾಮೂಲಿ ಪಟಾಕಿ ಯಾವುದು ಎಂಬುದೇ ತಿಳಿಯುತ್ತಿಲ್ಲ. ಸರ್ಕಾರದ ಆದೇಶ ಕಾಗದದ ಮೇಲಷ್ಟೇ ಉಳಿಯುತ್ತದೆ, ಮಾಮೂಲಿನಂತೆ ಯಾರ ಭಯವೂ ಇಲ್ಲದೆ ಪಟಾಕಿ ವ್ಯಾಪಾರ ವಹಿವಾಟುಗಳು ಪಡೆಯುತ್ತಿವೆ, ಇದನ್ನು ನಿಯಂತ್ರಿಸುವವರು ಯಾರು ?
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ , ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…
Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…
ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…