ಓದುಗರ ಪತ್ರ
ಬೆಳಕಿನ ಹಬ್ಬ ದೀಪಾವಳಿಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪರಿಸರ ಸ್ನೇಹಿ‘ ಹಸಿರು ಪಟಾಕಿ’ ಗಳನ್ನು ಮಾತ್ರ ಮಾರಾಟ ಮಾಡುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ. ಆದರೆ ಇದು ಕಟ್ಟು ನಿಟ್ಟಾಗಿ ಜಾರಿಗೆ ಬಂದಿದೆಯೇ ಎಂಬ ಅನುಮಾನವಿದೆ.
ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದ ಹೋಲ್ ಸೇಲ್ ಅಂಗಡಿಗಳಿಗೆ ಪಟಾಕಿತರಲು ಹೋಗಿದ್ದಾಗ ಅಲ್ಲಿನ ಅಂಗಡಿಯವರನ್ನು ‘ಹಸಿರು ಪಟಾಕಿ’ ಕೊಡಿ ಎಂದರೆ, ಅಂಗಡಿಗಳಲ್ಲಿ ಇರುವುದೆಲ್ಲವೂ ಹಸಿರು ಪಟಾಕಿ ಗಳೇ ಎಂದು ಹೇಳಿದರು.
ಹಸಿರು ಪಟಾಕಿ ಎಂದರೆ ಪಟಾಕಿಗಳಿಗೆ ಹಸಿರು ಬಣ್ಣದ ಕಾಗದವನ್ನು ಅಂಟಿಸಿರುತ್ತಾರೆಯೇ ಹೊರತು ಹೆಚ್ಚಿನ ವ್ಯತ್ಯಾಸ ಕಾಣುವುದಿಲ್ಲ. ಹಾಗಿದ್ದರೆ ಹಸಿರು ಪಟಾಕಿಗಳು ಎಂದರೆ ಯಾವುದು? ಹಸಿರು ಪಟಾಕಿಗಳಾಗಿದ್ದರೆ ಅದಕ್ಕೆ ಬಾಕ್ಸ್ ಮೇಲೆ ಲೇಬಲ್ ಹಾಕ ಬೇಕಲ್ಲವೇ? ಸಾರ್ವಜನಿಕರಿಗೆ ಹಸಿರು ಪಟಾಕಿ ಯಾವುದು ಮಾಮೂಲಿ ಪಟಾಕಿ ಯಾವುದು ಎಂಬುದೇ ತಿಳಿಯುತ್ತಿಲ್ಲ. ಸರ್ಕಾರದ ಆದೇಶ ಕಾಗದದ ಮೇಲಷ್ಟೇ ಉಳಿಯುತ್ತದೆ, ಮಾಮೂಲಿನಂತೆ ಯಾರ ಭಯವೂ ಇಲ್ಲದೆ ಪಟಾಕಿ ವ್ಯಾಪಾರ ವಹಿವಾಟುಗಳು ಪಡೆಯುತ್ತಿವೆ, ಇದನ್ನು ನಿಯಂತ್ರಿಸುವವರು ಯಾರು ?
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ , ಮೈಸೂರು
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…