Andolana originals

ಓದುಗರ ಪತ್ರ | ಧನಕರ್ ರಾಜೀನಾಮೆ ಹಿಂದಿನ ಮರ್ಮವೇನು?

ಕಳೆದ ೧೦ ದಿನಗಳ ಹಿಂದಷ್ಟೇ ಸಮಾರಂಭವೊಂದರಲ್ಲಿ “೨೦೨೭ರವರೆಗಿನ ನನ್ನ ಅವಧಿಯನ್ನು ಪೂರೈಸುತ್ತೇನೆ. ದೇವರ ಇಚ್ಛೆ ಇದ್ದರೆ. . . ” ಎಂದು ಹೇಳಿದ್ದ ರಾಜ್ಯ ಸಭೆಯ ಸಭಾಪತಿಯೂ ಆಗಿದ್ದ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ಜು. ೨೧ರಂದು ರಾತ್ರಿ ದಿಢೀರನೇ ರಾಜೀನಾಮೆ ನೀಡಿದರು. ರಾಷ್ಟ್ರಪತಿಗಳು ಅದನ್ನು ಅಂಗೀಕರಿಸಿದ್ದಾರೆ ಕೂಡ.

ಧನಕರ್ ಅವರು ತಮ್ಮ ರಾಜೀನಾಮೆಗೆ ಅನಾರೋಗ್ಯದ ಕಾರಣ ನೀಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಮತ್ತು ಧನಕರ್ ನಡುವೆ ಹೊಂದಾಣಿಕೆ ಇಲ್ಲದಿದ್ದುದೇ ಇದಕ್ಕೆ ಕಾರಣ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ರಾಜ್ಯಸಭೆಯಲ್ಲಿ ಪಹಾಲ್ಗಮ್ ಚರ್ಚೆಗೆ ಒಪ್ಪಿಗೆ ನೀಡಿದ್ದು, ಅದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರದೇ ಇದ್ದುದು ಹಾಗೂ ನ್ಯಾಯಮೂರ್ತಿ ವರ್ಮಾ ಅವರನ್ನು ಪದಚ್ಯುತಿಗೊಳಿಸುವ ತೀರ್ಮಾನವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸದೇ ಒಪ್ಪಿಗೆ ನೀಡಿದ ಪ್ರಕರಣಗಳು ಕಾರಣ ಎನ್ನಲಾಗಿದೆ. ಒಮ್ಮೆ ವಿರೋಧ ಪಕ್ಷ ಕಾಂಗ್ರೆಸ್‌ನವರು ಧನಕರ್ ಅವರನ್ನು ಪದಚ್ಯುತಗೊಳಿಸಲು ಯತ್ನ ನಡೆಸಿ ವಿಫಲರಾಗಿದ್ದರು. ಮಾಧ್ಯಮಗಳ ವರದಿ ನಿಜವಾಗಿದ್ದರೆ, ಈಗ ಆಡಳಿತ ಪಕ್ಷವೇ ವಿಪಕ್ಷದವರ ಆಸೆಯನ್ನು ಈಡೇರಿಸಿದಂತಾಯಿತು.

ನಿಜಕ್ಕೂ ಇದು ಸರ್ಕಾರದ ಸರ್ವಾಧಿಕಾರ ಧೋರಣೆಯನ್ನು ಬಿಂಬಿಸಿದೆ. ಧನಕರ್ ಅವರನ್ನು ಇಳಿಸಿ, ಬಿಹಾರದ ನಿತೀಶ್ ಕುಮಾರ್ ರವರನ್ನು ಉಪ ರಾಷ್ಟ್ರಪತಿ ಹುದ್ದೆಗೆ ಕೂರಿಸುವುದು, ಬಿಹಾರದಲ್ಲಿ ಬಿಜೆಪಿ ಪಕ್ಷದವರನ್ನು ಮುಖ್ಯಮಂತ್ರಿ ಮಾಡುವ ಹುನ್ನಾರವೂ ಇದೆ ಎಂದು ಹೇಳಲಾಗಿದೆ. ಅದೇನೇ ಇರಲಿ ಧನಕರ್ ಅವರಂತಹ ನೇರ ನುಡಿ ನಡೆಯ ವ್ಯಕ್ತಿ ತಮ್ಮ ಸ್ಥಾನದಿಂದ ಹಿಂದೆ ಸರಿದಿರುವುದರಿಂದ ಪ್ರಜಾಪ್ರಭುತ್ವ ಮತ್ತು ರಾಜ್ಯ ಸಭೆ ಬಡವಾದಂತಾಗಿದೆ.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ..!

ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್‌ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…

8 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಅಲೆಮಾರಿ ಮಕ್ಕಳ ಶಿಕ್ಷಣ ಸಂಗಾತಿ ʻಲರ್ನಿಂಗ್ ಕಂಪ್ಯಾನಿಯನ್ಸ್’ ‌

ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…

55 mins ago

ಓದುಗರ ಪತ್ರ | ಸ್ಪೀಕರ್ ಸಭಾತ್ಯಾಗ ಮಾಡುವ ಸ್ಥಿತಿ ಬಾರದಿರಲಿ

ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…

1 hour ago

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

3 hours ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

3 hours ago

ಶಾಲಾ ಮಕ್ಕಳಿದ್ದ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : 9 ಮಕ್ಕಳಿಗೆ ಪೆಟ್ಟು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…

4 hours ago