jagdeep dhankar
ಕಳೆದ ೧೦ ದಿನಗಳ ಹಿಂದಷ್ಟೇ ಸಮಾರಂಭವೊಂದರಲ್ಲಿ “೨೦೨೭ರವರೆಗಿನ ನನ್ನ ಅವಧಿಯನ್ನು ಪೂರೈಸುತ್ತೇನೆ. ದೇವರ ಇಚ್ಛೆ ಇದ್ದರೆ. . . ” ಎಂದು ಹೇಳಿದ್ದ ರಾಜ್ಯ ಸಭೆಯ ಸಭಾಪತಿಯೂ ಆಗಿದ್ದ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ಜು. ೨೧ರಂದು ರಾತ್ರಿ ದಿಢೀರನೇ ರಾಜೀನಾಮೆ ನೀಡಿದರು. ರಾಷ್ಟ್ರಪತಿಗಳು ಅದನ್ನು ಅಂಗೀಕರಿಸಿದ್ದಾರೆ ಕೂಡ.
ಧನಕರ್ ಅವರು ತಮ್ಮ ರಾಜೀನಾಮೆಗೆ ಅನಾರೋಗ್ಯದ ಕಾರಣ ನೀಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಮತ್ತು ಧನಕರ್ ನಡುವೆ ಹೊಂದಾಣಿಕೆ ಇಲ್ಲದಿದ್ದುದೇ ಇದಕ್ಕೆ ಕಾರಣ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ರಾಜ್ಯಸಭೆಯಲ್ಲಿ ಪಹಾಲ್ಗಮ್ ಚರ್ಚೆಗೆ ಒಪ್ಪಿಗೆ ನೀಡಿದ್ದು, ಅದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರದೇ ಇದ್ದುದು ಹಾಗೂ ನ್ಯಾಯಮೂರ್ತಿ ವರ್ಮಾ ಅವರನ್ನು ಪದಚ್ಯುತಿಗೊಳಿಸುವ ತೀರ್ಮಾನವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸದೇ ಒಪ್ಪಿಗೆ ನೀಡಿದ ಪ್ರಕರಣಗಳು ಕಾರಣ ಎನ್ನಲಾಗಿದೆ. ಒಮ್ಮೆ ವಿರೋಧ ಪಕ್ಷ ಕಾಂಗ್ರೆಸ್ನವರು ಧನಕರ್ ಅವರನ್ನು ಪದಚ್ಯುತಗೊಳಿಸಲು ಯತ್ನ ನಡೆಸಿ ವಿಫಲರಾಗಿದ್ದರು. ಮಾಧ್ಯಮಗಳ ವರದಿ ನಿಜವಾಗಿದ್ದರೆ, ಈಗ ಆಡಳಿತ ಪಕ್ಷವೇ ವಿಪಕ್ಷದವರ ಆಸೆಯನ್ನು ಈಡೇರಿಸಿದಂತಾಯಿತು.
ನಿಜಕ್ಕೂ ಇದು ಸರ್ಕಾರದ ಸರ್ವಾಧಿಕಾರ ಧೋರಣೆಯನ್ನು ಬಿಂಬಿಸಿದೆ. ಧನಕರ್ ಅವರನ್ನು ಇಳಿಸಿ, ಬಿಹಾರದ ನಿತೀಶ್ ಕುಮಾರ್ ರವರನ್ನು ಉಪ ರಾಷ್ಟ್ರಪತಿ ಹುದ್ದೆಗೆ ಕೂರಿಸುವುದು, ಬಿಹಾರದಲ್ಲಿ ಬಿಜೆಪಿ ಪಕ್ಷದವರನ್ನು ಮುಖ್ಯಮಂತ್ರಿ ಮಾಡುವ ಹುನ್ನಾರವೂ ಇದೆ ಎಂದು ಹೇಳಲಾಗಿದೆ. ಅದೇನೇ ಇರಲಿ ಧನಕರ್ ಅವರಂತಹ ನೇರ ನುಡಿ ನಡೆಯ ವ್ಯಕ್ತಿ ತಮ್ಮ ಸ್ಥಾನದಿಂದ ಹಿಂದೆ ಸರಿದಿರುವುದರಿಂದ ಪ್ರಜಾಪ್ರಭುತ್ವ ಮತ್ತು ರಾಜ್ಯ ಸಭೆ ಬಡವಾದಂತಾಗಿದೆ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…