Andolana originals

ಓದುಗರ ಪತ್ರ | ಧನಕರ್ ರಾಜೀನಾಮೆ ಹಿಂದಿನ ಮರ್ಮವೇನು?

ಕಳೆದ ೧೦ ದಿನಗಳ ಹಿಂದಷ್ಟೇ ಸಮಾರಂಭವೊಂದರಲ್ಲಿ “೨೦೨೭ರವರೆಗಿನ ನನ್ನ ಅವಧಿಯನ್ನು ಪೂರೈಸುತ್ತೇನೆ. ದೇವರ ಇಚ್ಛೆ ಇದ್ದರೆ. . . ” ಎಂದು ಹೇಳಿದ್ದ ರಾಜ್ಯ ಸಭೆಯ ಸಭಾಪತಿಯೂ ಆಗಿದ್ದ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ಜು. ೨೧ರಂದು ರಾತ್ರಿ ದಿಢೀರನೇ ರಾಜೀನಾಮೆ ನೀಡಿದರು. ರಾಷ್ಟ್ರಪತಿಗಳು ಅದನ್ನು ಅಂಗೀಕರಿಸಿದ್ದಾರೆ ಕೂಡ.

ಧನಕರ್ ಅವರು ತಮ್ಮ ರಾಜೀನಾಮೆಗೆ ಅನಾರೋಗ್ಯದ ಕಾರಣ ನೀಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಮತ್ತು ಧನಕರ್ ನಡುವೆ ಹೊಂದಾಣಿಕೆ ಇಲ್ಲದಿದ್ದುದೇ ಇದಕ್ಕೆ ಕಾರಣ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ರಾಜ್ಯಸಭೆಯಲ್ಲಿ ಪಹಾಲ್ಗಮ್ ಚರ್ಚೆಗೆ ಒಪ್ಪಿಗೆ ನೀಡಿದ್ದು, ಅದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರದೇ ಇದ್ದುದು ಹಾಗೂ ನ್ಯಾಯಮೂರ್ತಿ ವರ್ಮಾ ಅವರನ್ನು ಪದಚ್ಯುತಿಗೊಳಿಸುವ ತೀರ್ಮಾನವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸದೇ ಒಪ್ಪಿಗೆ ನೀಡಿದ ಪ್ರಕರಣಗಳು ಕಾರಣ ಎನ್ನಲಾಗಿದೆ. ಒಮ್ಮೆ ವಿರೋಧ ಪಕ್ಷ ಕಾಂಗ್ರೆಸ್‌ನವರು ಧನಕರ್ ಅವರನ್ನು ಪದಚ್ಯುತಗೊಳಿಸಲು ಯತ್ನ ನಡೆಸಿ ವಿಫಲರಾಗಿದ್ದರು. ಮಾಧ್ಯಮಗಳ ವರದಿ ನಿಜವಾಗಿದ್ದರೆ, ಈಗ ಆಡಳಿತ ಪಕ್ಷವೇ ವಿಪಕ್ಷದವರ ಆಸೆಯನ್ನು ಈಡೇರಿಸಿದಂತಾಯಿತು.

ನಿಜಕ್ಕೂ ಇದು ಸರ್ಕಾರದ ಸರ್ವಾಧಿಕಾರ ಧೋರಣೆಯನ್ನು ಬಿಂಬಿಸಿದೆ. ಧನಕರ್ ಅವರನ್ನು ಇಳಿಸಿ, ಬಿಹಾರದ ನಿತೀಶ್ ಕುಮಾರ್ ರವರನ್ನು ಉಪ ರಾಷ್ಟ್ರಪತಿ ಹುದ್ದೆಗೆ ಕೂರಿಸುವುದು, ಬಿಹಾರದಲ್ಲಿ ಬಿಜೆಪಿ ಪಕ್ಷದವರನ್ನು ಮುಖ್ಯಮಂತ್ರಿ ಮಾಡುವ ಹುನ್ನಾರವೂ ಇದೆ ಎಂದು ಹೇಳಲಾಗಿದೆ. ಅದೇನೇ ಇರಲಿ ಧನಕರ್ ಅವರಂತಹ ನೇರ ನುಡಿ ನಡೆಯ ವ್ಯಕ್ತಿ ತಮ್ಮ ಸ್ಥಾನದಿಂದ ಹಿಂದೆ ಸರಿದಿರುವುದರಿಂದ ಪ್ರಜಾಪ್ರಭುತ್ವ ಮತ್ತು ರಾಜ್ಯ ಸಭೆ ಬಡವಾದಂತಾಗಿದೆ.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 hours ago