Andolana originals

ಓದುಗರ ಪತ್ರ: ಇದು ಯಾವ ಸೀಮೆ ನ್ಯಾಯ?

ಜಲಮಂಡಳಿಯ ಬಿಲ್ ಬಾಕಿ ಇರಿಸಿಕೊಂಡವರಿಗೆ ‘ಏಕಬಾರಿ ತೀರುವಳಿ ವ್ಯವಸ್ಥೆ’ ಅಡಿಯಲ್ಲಿ ದಂಡ ಮತ್ತು ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆಯಂತೆ. ಟ್ರಾಫಿಕ್ ಅಪರಾಧಗಳಿಗೆ ವಿಧಿಸಿದ ದಂಡವನ್ನು ಬಾಕಿ ಇರಿಸಿ ಕೊಂಡವರಿಗೆ ಅರ್ಧ ದಂಡವನ್ನು ಮನ್ನಾಮಾಡುವ ಯೋಜನೆ ಭಾರೀ ಯಶಸ್ಸು ಪಡೆದಿರುವುದನ್ನು ನೋಡಿ, ಇದೇ ಮಾದರಿ ಯಲ್ಲಿ ಜಲಮಂಡಳಿ ಕೂಡ ಬಾಕಿ ವಸೂಲಿಗೆ ಮುಂದಾಗಿದೆ.

ನಗರ ಪಾಲಿಕೆಯ ಮನೆ ತೆರಿಗೆ ವಸೂಲಿಯಲ್ಲೂ ಇದೇ ಮಾದರಿ ಜಾರಿಯಲ್ಲಿದೆ. ಅಕಸ್ಮಾತ್ ಇದು ನಿರೀಕ್ಷೆಯಷ್ಟು ಯಶಸ್ಸು ಪಡೆಯದಿದ್ದರೆ, ಜಲಮಂಡಳಿ ಬಾಕಿ ಇರುವ ಬಿಲ್‌ನಲ್ಲಿ ಸ್ವಲ್ಪ ಮೊತ್ತವನ್ನು ಮುಂದಿನ ದಿನಗಳಲ್ಲಿ ಮನ್ನಾ ಮಾಡಬಹುದೇನೋ? ಬ್ಯಾಂಕ್ ಸಾಲ ವಸೂಲಾತಿಯಲ್ಲೂ ಏಕಬಾರಿ ತೀರುವಳಿ ಮತ್ತು ದಿವಾಳಿ ಕಾನೂನಿನಡಿಯಲ್ಲಿ ಇಂತಹ ವಿನಾಯಿತಿಯನ್ನು ನೀಡಲಾಗುತ್ತದೆ. ಅಂತಿಮವಾಗಿ ಈ ವಿನಾಯಿತಿಯಿಂದ ‘ಬಾಕಿ’ ವಸೂಲಾಗಬಹುದು. ಆದರೆ ಮುಂದಿನ ದಿನಗಳಲ್ಲಿ ನಿಯತ್ತಾಗಿ ಶುಲ್ಕ ಪಾವತಿಸುವವರು ಕೂಡ ಬಾಕಿ ಪಾವತಿಸುವಲ್ಲಿ ವಿಳಂಬಮಾಡಿ ವಿನಾಯಿತಿ ನಿರೀಕ್ಷಿಸುವುದನ್ನು ಅಲ್ಲಗಳೆಯಲಾಗದು. ಪ್ರಾಮಾಣಿಕವಾಗಿ ನಿಗದಿತ ಸಮಯಕ್ಕೆ ಶುಲ್ಕ ಪಾವತಿಸುವವರಿಗೆ ಯಾವುದೇ ರೀತಿಯ ವಿನಾಯಿತಿಯನ್ನು ನಿರಾಕರಿಸಿ ಬಾಕಿ ಇರಿಸಿಕೊಳ್ಳುವವರಿಗೆ ಮಾತ್ರ ಈ ರೀತಿ ವಿನಾಯಿತಿ ಕೊಡುವುದು ಯಾವ ಸೀಮೆ ನ್ಯಾಯ? ಎಂದು ಪ್ರಜ್ಞಾವಂತರು ಪ್ರಶ್ನಿಸುವಂತಾಗಿದೆ.

-ರಮಾನಂದ ಶರ್ಮಾ,ಜೆ.ಪಿ.ನಗರ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

5 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

8 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

8 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

8 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

9 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

11 hours ago