ಓದುಗರ ಪತ್ರ
ಜಲಮಂಡಳಿಯ ಬಿಲ್ ಬಾಕಿ ಇರಿಸಿಕೊಂಡವರಿಗೆ ‘ಏಕಬಾರಿ ತೀರುವಳಿ ವ್ಯವಸ್ಥೆ’ ಅಡಿಯಲ್ಲಿ ದಂಡ ಮತ್ತು ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆಯಂತೆ. ಟ್ರಾಫಿಕ್ ಅಪರಾಧಗಳಿಗೆ ವಿಧಿಸಿದ ದಂಡವನ್ನು ಬಾಕಿ ಇರಿಸಿ ಕೊಂಡವರಿಗೆ ಅರ್ಧ ದಂಡವನ್ನು ಮನ್ನಾಮಾಡುವ ಯೋಜನೆ ಭಾರೀ ಯಶಸ್ಸು ಪಡೆದಿರುವುದನ್ನು ನೋಡಿ, ಇದೇ ಮಾದರಿ ಯಲ್ಲಿ ಜಲಮಂಡಳಿ ಕೂಡ ಬಾಕಿ ವಸೂಲಿಗೆ ಮುಂದಾಗಿದೆ.
ನಗರ ಪಾಲಿಕೆಯ ಮನೆ ತೆರಿಗೆ ವಸೂಲಿಯಲ್ಲೂ ಇದೇ ಮಾದರಿ ಜಾರಿಯಲ್ಲಿದೆ. ಅಕಸ್ಮಾತ್ ಇದು ನಿರೀಕ್ಷೆಯಷ್ಟು ಯಶಸ್ಸು ಪಡೆಯದಿದ್ದರೆ, ಜಲಮಂಡಳಿ ಬಾಕಿ ಇರುವ ಬಿಲ್ನಲ್ಲಿ ಸ್ವಲ್ಪ ಮೊತ್ತವನ್ನು ಮುಂದಿನ ದಿನಗಳಲ್ಲಿ ಮನ್ನಾ ಮಾಡಬಹುದೇನೋ? ಬ್ಯಾಂಕ್ ಸಾಲ ವಸೂಲಾತಿಯಲ್ಲೂ ಏಕಬಾರಿ ತೀರುವಳಿ ಮತ್ತು ದಿವಾಳಿ ಕಾನೂನಿನಡಿಯಲ್ಲಿ ಇಂತಹ ವಿನಾಯಿತಿಯನ್ನು ನೀಡಲಾಗುತ್ತದೆ. ಅಂತಿಮವಾಗಿ ಈ ವಿನಾಯಿತಿಯಿಂದ ‘ಬಾಕಿ’ ವಸೂಲಾಗಬಹುದು. ಆದರೆ ಮುಂದಿನ ದಿನಗಳಲ್ಲಿ ನಿಯತ್ತಾಗಿ ಶುಲ್ಕ ಪಾವತಿಸುವವರು ಕೂಡ ಬಾಕಿ ಪಾವತಿಸುವಲ್ಲಿ ವಿಳಂಬಮಾಡಿ ವಿನಾಯಿತಿ ನಿರೀಕ್ಷಿಸುವುದನ್ನು ಅಲ್ಲಗಳೆಯಲಾಗದು. ಪ್ರಾಮಾಣಿಕವಾಗಿ ನಿಗದಿತ ಸಮಯಕ್ಕೆ ಶುಲ್ಕ ಪಾವತಿಸುವವರಿಗೆ ಯಾವುದೇ ರೀತಿಯ ವಿನಾಯಿತಿಯನ್ನು ನಿರಾಕರಿಸಿ ಬಾಕಿ ಇರಿಸಿಕೊಳ್ಳುವವರಿಗೆ ಮಾತ್ರ ಈ ರೀತಿ ವಿನಾಯಿತಿ ಕೊಡುವುದು ಯಾವ ಸೀಮೆ ನ್ಯಾಯ? ಎಂದು ಪ್ರಜ್ಞಾವಂತರು ಪ್ರಶ್ನಿಸುವಂತಾಗಿದೆ.
-ರಮಾನಂದ ಶರ್ಮಾ,ಜೆ.ಪಿ.ನಗರ, ಬೆಂಗಳೂರು
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…