ಓದುಗರ ಪತ್ರ
ಜಲಮಂಡಳಿಯ ಬಿಲ್ ಬಾಕಿ ಇರಿಸಿಕೊಂಡವರಿಗೆ ‘ಏಕಬಾರಿ ತೀರುವಳಿ ವ್ಯವಸ್ಥೆ’ ಅಡಿಯಲ್ಲಿ ದಂಡ ಮತ್ತು ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆಯಂತೆ. ಟ್ರಾಫಿಕ್ ಅಪರಾಧಗಳಿಗೆ ವಿಧಿಸಿದ ದಂಡವನ್ನು ಬಾಕಿ ಇರಿಸಿ ಕೊಂಡವರಿಗೆ ಅರ್ಧ ದಂಡವನ್ನು ಮನ್ನಾಮಾಡುವ ಯೋಜನೆ ಭಾರೀ ಯಶಸ್ಸು ಪಡೆದಿರುವುದನ್ನು ನೋಡಿ, ಇದೇ ಮಾದರಿ ಯಲ್ಲಿ ಜಲಮಂಡಳಿ ಕೂಡ ಬಾಕಿ ವಸೂಲಿಗೆ ಮುಂದಾಗಿದೆ.
ನಗರ ಪಾಲಿಕೆಯ ಮನೆ ತೆರಿಗೆ ವಸೂಲಿಯಲ್ಲೂ ಇದೇ ಮಾದರಿ ಜಾರಿಯಲ್ಲಿದೆ. ಅಕಸ್ಮಾತ್ ಇದು ನಿರೀಕ್ಷೆಯಷ್ಟು ಯಶಸ್ಸು ಪಡೆಯದಿದ್ದರೆ, ಜಲಮಂಡಳಿ ಬಾಕಿ ಇರುವ ಬಿಲ್ನಲ್ಲಿ ಸ್ವಲ್ಪ ಮೊತ್ತವನ್ನು ಮುಂದಿನ ದಿನಗಳಲ್ಲಿ ಮನ್ನಾ ಮಾಡಬಹುದೇನೋ? ಬ್ಯಾಂಕ್ ಸಾಲ ವಸೂಲಾತಿಯಲ್ಲೂ ಏಕಬಾರಿ ತೀರುವಳಿ ಮತ್ತು ದಿವಾಳಿ ಕಾನೂನಿನಡಿಯಲ್ಲಿ ಇಂತಹ ವಿನಾಯಿತಿಯನ್ನು ನೀಡಲಾಗುತ್ತದೆ. ಅಂತಿಮವಾಗಿ ಈ ವಿನಾಯಿತಿಯಿಂದ ‘ಬಾಕಿ’ ವಸೂಲಾಗಬಹುದು. ಆದರೆ ಮುಂದಿನ ದಿನಗಳಲ್ಲಿ ನಿಯತ್ತಾಗಿ ಶುಲ್ಕ ಪಾವತಿಸುವವರು ಕೂಡ ಬಾಕಿ ಪಾವತಿಸುವಲ್ಲಿ ವಿಳಂಬಮಾಡಿ ವಿನಾಯಿತಿ ನಿರೀಕ್ಷಿಸುವುದನ್ನು ಅಲ್ಲಗಳೆಯಲಾಗದು. ಪ್ರಾಮಾಣಿಕವಾಗಿ ನಿಗದಿತ ಸಮಯಕ್ಕೆ ಶುಲ್ಕ ಪಾವತಿಸುವವರಿಗೆ ಯಾವುದೇ ರೀತಿಯ ವಿನಾಯಿತಿಯನ್ನು ನಿರಾಕರಿಸಿ ಬಾಕಿ ಇರಿಸಿಕೊಳ್ಳುವವರಿಗೆ ಮಾತ್ರ ಈ ರೀತಿ ವಿನಾಯಿತಿ ಕೊಡುವುದು ಯಾವ ಸೀಮೆ ನ್ಯಾಯ? ಎಂದು ಪ್ರಜ್ಞಾವಂತರು ಪ್ರಶ್ನಿಸುವಂತಾಗಿದೆ.
-ರಮಾನಂದ ಶರ್ಮಾ,ಜೆ.ಪಿ.ನಗರ, ಬೆಂಗಳೂರು
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…
ಬೆಂಗಳೂರು: ಸಮುದ್ರ ಭಾಗದಲ್ಲಿ ವೈಪರೀತ್ಯಗಳು ಮುಂದುವರಿದಿದ್ದು, ಮುಂಗಾರು ಮಳೆ ಆಗಮನಕ್ಕೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವ…
ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ಚನ್ನೈನ ತಮ್ಮ ನಿವಾಸದಲ್ಲಿ…
ಇಂದೋರ್ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…