ಓದುಗರ ಪತ್ರ
೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು, ದ್ವಾರಕೀಶ್, ರಾಜೇಶ್,. ವಜ್ರಮುನಿ, ಅಶ್ವತ್ಥ್ ಮೊದಲಾದ ನಟರು ಗುಂಪುಗಳಾಗಿ ಬೇರ್ಪಟ್ಟಿರಲಿಲ್ಲ. ಆ ದಿನ ಯಾವ ನಟರ ಸಿನಿಮಾಗಳು ಗೆದ್ದರೂ ಎಲ್ಲರೂ ಒಂದೆಡೆ ಸೇರಿ ಸಂಭ್ರಮಿಸುತಿದ್ದರು.
ಡಾ.ರಾಜಕುಮಾರ್ ಅಭಿನಯಿಸಿದ ಸಿನಿಮಾಗಳೆಲ್ಲ ೧೦೦ ದಿನಗಳಿಗೂ ಹೆಚ್ಚು ಕಾಲ ಪ್ರದರ್ಶನವಾಗುತ್ತಿತ್ತು. ಆಗ ಅಲ್ಲಿ ಸ್ನೇಹ ಪ್ರೀತಿ ವಿಶ್ವಾಸ ಎಲ್ಲೆಡೆ ಮನೆ ಮಾಡಿರುತ್ತಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಹಲವಾರು ನಟರು ಗುಂಪುಗಳಾಗಿ ಬೇರ್ಪಟ್ಟಿದ್ದು, ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಸ್ವಾರ್ಥದಿಂದ ನನ್ನ ಸಿನಿಮಾ ಮಾತ್ರ ಗೆಲ್ಲಬೇಕು, ಬೇರೆಯವರ ಸಿನಿಮಾ ಗೆಲ್ಲಬಾರದು ಎಂಬ ಅಸೂಯೆ ಮನೆ ಮಾಡಿದೆ. ಈ ದ್ವೇಷ ಸಾಧನೆ ಇದೇ ರೀತಿ ಮುಂದುವರಿದರೆ ಸಿನಿಮಾ ರಂಗದ ಮೇಲೆ ಪರಿಣಾಮ ಬೀರುತ್ತದೆ. ಯಾವುದೇ ಚಿತ್ರ ಚೆನ್ನಾಗಿದ್ದರೆ ಗೆಲ್ಲುತ್ತದೆ. ಹೀಗೆ ಜಗಳ ದ್ವೇಷ ಮಾಡಿ ನೆಚ್ಚಿನ ನಟರ ಅಭಿಮಾನಿಗಳ ಮನಸ್ಸನ್ನು ನೋಯಿಸಬೇಡಿ. ನಾವೆಲ್ಲರೂ ಒಂದೇ ಎನ್ನುವ ಭಾವನೆ ಮೂಡಲಿ. ಇದು ಸಿನಿಮಾ ರಂಗದ ಮೇಲೂ ಪರಿಣಾಮ ಬೀರುತ್ತದೆ.
-ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…