ಓದುಗರ ಪತ್ರ
೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು, ದ್ವಾರಕೀಶ್, ರಾಜೇಶ್,. ವಜ್ರಮುನಿ, ಅಶ್ವತ್ಥ್ ಮೊದಲಾದ ನಟರು ಗುಂಪುಗಳಾಗಿ ಬೇರ್ಪಟ್ಟಿರಲಿಲ್ಲ. ಆ ದಿನ ಯಾವ ನಟರ ಸಿನಿಮಾಗಳು ಗೆದ್ದರೂ ಎಲ್ಲರೂ ಒಂದೆಡೆ ಸೇರಿ ಸಂಭ್ರಮಿಸುತಿದ್ದರು.
ಡಾ.ರಾಜಕುಮಾರ್ ಅಭಿನಯಿಸಿದ ಸಿನಿಮಾಗಳೆಲ್ಲ ೧೦೦ ದಿನಗಳಿಗೂ ಹೆಚ್ಚು ಕಾಲ ಪ್ರದರ್ಶನವಾಗುತ್ತಿತ್ತು. ಆಗ ಅಲ್ಲಿ ಸ್ನೇಹ ಪ್ರೀತಿ ವಿಶ್ವಾಸ ಎಲ್ಲೆಡೆ ಮನೆ ಮಾಡಿರುತ್ತಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಹಲವಾರು ನಟರು ಗುಂಪುಗಳಾಗಿ ಬೇರ್ಪಟ್ಟಿದ್ದು, ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಸ್ವಾರ್ಥದಿಂದ ನನ್ನ ಸಿನಿಮಾ ಮಾತ್ರ ಗೆಲ್ಲಬೇಕು, ಬೇರೆಯವರ ಸಿನಿಮಾ ಗೆಲ್ಲಬಾರದು ಎಂಬ ಅಸೂಯೆ ಮನೆ ಮಾಡಿದೆ. ಈ ದ್ವೇಷ ಸಾಧನೆ ಇದೇ ರೀತಿ ಮುಂದುವರಿದರೆ ಸಿನಿಮಾ ರಂಗದ ಮೇಲೆ ಪರಿಣಾಮ ಬೀರುತ್ತದೆ. ಯಾವುದೇ ಚಿತ್ರ ಚೆನ್ನಾಗಿದ್ದರೆ ಗೆಲ್ಲುತ್ತದೆ. ಹೀಗೆ ಜಗಳ ದ್ವೇಷ ಮಾಡಿ ನೆಚ್ಚಿನ ನಟರ ಅಭಿಮಾನಿಗಳ ಮನಸ್ಸನ್ನು ನೋಯಿಸಬೇಡಿ. ನಾವೆಲ್ಲರೂ ಒಂದೇ ಎನ್ನುವ ಭಾವನೆ ಮೂಡಲಿ. ಇದು ಸಿನಿಮಾ ರಂಗದ ಮೇಲೂ ಪರಿಣಾಮ ಬೀರುತ್ತದೆ.
-ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು
ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ಗೆ ನಟಿ…
ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…
ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…
ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…
ಅಹಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…