Andolana originals

ಓದುಗರ ಪತ್ರ:  ಚಲನಚಿತ್ರ ರಂಗದಲ್ಲಿ ಏನಿದು ಗದ್ದಲ?

೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು, ದ್ವಾರಕೀಶ್, ರಾಜೇಶ್,. ವಜ್ರಮುನಿ, ಅಶ್ವತ್ಥ್ ಮೊದಲಾದ ನಟರು ಗುಂಪುಗಳಾಗಿ ಬೇರ್ಪಟ್ಟಿರಲಿಲ್ಲ. ಆ ದಿನ ಯಾವ ನಟರ ಸಿನಿಮಾಗಳು ಗೆದ್ದರೂ ಎಲ್ಲರೂ ಒಂದೆಡೆ ಸೇರಿ ಸಂಭ್ರಮಿಸುತಿದ್ದರು.

ಡಾ.ರಾಜಕುಮಾರ್ ಅಭಿನಯಿಸಿದ ಸಿನಿಮಾಗಳೆಲ್ಲ ೧೦೦ ದಿನಗಳಿಗೂ ಹೆಚ್ಚು ಕಾಲ ಪ್ರದರ್ಶನವಾಗುತ್ತಿತ್ತು. ಆಗ ಅಲ್ಲಿ ಸ್ನೇಹ ಪ್ರೀತಿ ವಿಶ್ವಾಸ ಎಲ್ಲೆಡೆ ಮನೆ ಮಾಡಿರುತ್ತಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ.  ಹಲವಾರು ನಟರು ಗುಂಪುಗಳಾಗಿ ಬೇರ್ಪಟ್ಟಿದ್ದು, ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಸ್ವಾರ್ಥದಿಂದ ನನ್ನ ಸಿನಿಮಾ ಮಾತ್ರ ಗೆಲ್ಲಬೇಕು, ಬೇರೆಯವರ ಸಿನಿಮಾ ಗೆಲ್ಲಬಾರದು ಎಂಬ ಅಸೂಯೆ ಮನೆ ಮಾಡಿದೆ. ಈ ದ್ವೇಷ ಸಾಧನೆ ಇದೇ ರೀತಿ ಮುಂದುವರಿದರೆ ಸಿನಿಮಾ ರಂಗದ ಮೇಲೆ ಪರಿಣಾಮ ಬೀರುತ್ತದೆ. ಯಾವುದೇ ಚಿತ್ರ ಚೆನ್ನಾಗಿದ್ದರೆ ಗೆಲ್ಲುತ್ತದೆ. ಹೀಗೆ ಜಗಳ ದ್ವೇಷ ಮಾಡಿ ನೆಚ್ಚಿನ ನಟರ ಅಭಿಮಾನಿಗಳ ಮನಸ್ಸನ್ನು ನೋಯಿಸಬೇಡಿ. ನಾವೆಲ್ಲರೂ ಒಂದೇ ಎನ್ನುವ ಭಾವನೆ ಮೂಡಲಿ. ಇದು ಸಿನಿಮಾ ರಂಗದ ಮೇಲೂ ಪರಿಣಾಮ ಬೀರುತ್ತದೆ.

-ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

2 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

3 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

4 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

4 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

5 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

5 hours ago