Andolana originals

ಓದುಗರ ಪತ್ರ:  ಚಲನಚಿತ್ರ ರಂಗದಲ್ಲಿ ಏನಿದು ಗದ್ದಲ?

೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು, ದ್ವಾರಕೀಶ್, ರಾಜೇಶ್,. ವಜ್ರಮುನಿ, ಅಶ್ವತ್ಥ್ ಮೊದಲಾದ ನಟರು ಗುಂಪುಗಳಾಗಿ ಬೇರ್ಪಟ್ಟಿರಲಿಲ್ಲ. ಆ ದಿನ ಯಾವ ನಟರ ಸಿನಿಮಾಗಳು ಗೆದ್ದರೂ ಎಲ್ಲರೂ ಒಂದೆಡೆ ಸೇರಿ ಸಂಭ್ರಮಿಸುತಿದ್ದರು.

ಡಾ.ರಾಜಕುಮಾರ್ ಅಭಿನಯಿಸಿದ ಸಿನಿಮಾಗಳೆಲ್ಲ ೧೦೦ ದಿನಗಳಿಗೂ ಹೆಚ್ಚು ಕಾಲ ಪ್ರದರ್ಶನವಾಗುತ್ತಿತ್ತು. ಆಗ ಅಲ್ಲಿ ಸ್ನೇಹ ಪ್ರೀತಿ ವಿಶ್ವಾಸ ಎಲ್ಲೆಡೆ ಮನೆ ಮಾಡಿರುತ್ತಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ.  ಹಲವಾರು ನಟರು ಗುಂಪುಗಳಾಗಿ ಬೇರ್ಪಟ್ಟಿದ್ದು, ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಸ್ವಾರ್ಥದಿಂದ ನನ್ನ ಸಿನಿಮಾ ಮಾತ್ರ ಗೆಲ್ಲಬೇಕು, ಬೇರೆಯವರ ಸಿನಿಮಾ ಗೆಲ್ಲಬಾರದು ಎಂಬ ಅಸೂಯೆ ಮನೆ ಮಾಡಿದೆ. ಈ ದ್ವೇಷ ಸಾಧನೆ ಇದೇ ರೀತಿ ಮುಂದುವರಿದರೆ ಸಿನಿಮಾ ರಂಗದ ಮೇಲೆ ಪರಿಣಾಮ ಬೀರುತ್ತದೆ. ಯಾವುದೇ ಚಿತ್ರ ಚೆನ್ನಾಗಿದ್ದರೆ ಗೆಲ್ಲುತ್ತದೆ. ಹೀಗೆ ಜಗಳ ದ್ವೇಷ ಮಾಡಿ ನೆಚ್ಚಿನ ನಟರ ಅಭಿಮಾನಿಗಳ ಮನಸ್ಸನ್ನು ನೋಯಿಸಬೇಡಿ. ನಾವೆಲ್ಲರೂ ಒಂದೇ ಎನ್ನುವ ಭಾವನೆ ಮೂಡಲಿ. ಇದು ಸಿನಿಮಾ ರಂಗದ ಮೇಲೂ ಪರಿಣಾಮ ಬೀರುತ್ತದೆ.

-ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

31 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

9 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

9 hours ago