Andolana originals

ಓದುಗರ ಪತ್ರ: ಭ್ರೂಣ ಹತ್ಯೆಗಳಿಗೆ ಕಡಿವಾಣ ಎಂದು?

ಒಂಬತ್ತು ತಿಂಗಳ ಹಿಂದೆಯಷ್ಟೇ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ನಡೆದಿದೆ ಎನ್ನಲಾದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.

ಈ ಪ್ರಕರಣ ಮಾಸುವ ಮುನ್ನವೇ ಈಗ ಮತ್ತೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯೊಂದರಲ್ಲಿ ಹೆಣ್ಣು ಭ್ರೂಣ ಹತ್ಯೆಯ ಜಾಲ ಪತ್ತೆ ಯಾಗಿರುವುದು ಆತಂಕ ಸೃಷ್ಟಿಸಿದೆ.

ಕಳೆದ ಬಾರಿ ಮಂಡ್ಯ ಜಿಲ್ಲೆಯ ಪಾಂಡವಪುರದ ಆರೋಗ್ಯಾಧಿಕಾರಿಗಳ ಕಚೇರಿಯ ಹಿಂಭಾಗವೇ ಭ್ರೂಣ ಹತ್ಯೆಯ ಜಾಲ ಪತ್ತೆಯಾಗಿತ್ತು. ಇಷ್ಟಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಕಟ್ಟುನಿಟ್ಟಿನ ಕ್ರಮವಹಿಸದ ಪರಿಣಾಮ ಈಗ ಮಂಡ್ಯ ಜಿಲ್ಲೆಯಲ್ಲಿಯೇ ಅತಿಹೆಚ್ಚು ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ದಾಖಲಾಗಿರುವುದು ವಿಷಾದಕರ ಸಂಗತಿ.

ರಾಜ್ಯದ 14 ಜಿಲ್ಲೆಗಳಲ್ಲಿ 6 ವರ್ಷದೊಳಗಿನ ಹೆಣ್ಣು ಮಕ್ಕಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ದಾಖಲಾಗಿದೆ. ಬಾಗಲಕೋಟೆ, ವಿಜಯಪುರ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಪ್ರತಿ 1000 ಗಂಡು ಮಕ್ಕಳಿಗೆ ಕೇವಲ 624 ರಿಂದ 750 ಹೆಣ್ಣು ಮಕ್ಕಳ ಸರಾಸರಿ ಇದೆ ಎಂಬುದಾಗಿ ವರದಿಗಳು ಹೇಳುತ್ತಿವೆ. 2011ರ ಜನಗಣತಿ ಪ್ರಕಾರ ಪ್ರತಿ 1000 ಗಂಡು ಮಕ್ಕಳಿಗೆ 924 ಹೆಣ್ಣುಮಕ್ಕಳ ಸರಾಸರಿ ಇದ್ದದ್ದು ಈಗ ಇಳಿಕೆಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರೊಬ್ಬರು, ನಾವು ಎಷ್ಟೇ ಕಠಿಣ ಕ್ರಮಗಳನ್ನು ಕೈಗೊಂಡರೂ ಭ್ರೂಣ ಹತ್ಯೆಗಳು ಮರುಕಳುಹಿಸುತ್ತಿವೆ ಎಂದು ಬೇಜವಾಬ್ದಾರಿಯ ಮತ್ತು ಅಸಹಾಯಕತೆಯ ಹೇಳಿಕೆ ನೀಡಿರುವುದು ವಿಷಾದನೀಯ.
ಈಗಾಗಲೇ ದಾಖಲಾಗಿರುವ ಇಂತಹ ಪ್ರಕರಣಗಳ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸದ ಹೊರತಾಗಿ ಭ್ರೂಣ ಹತ್ಯೆಗಳನ್ನು ತಡೆಗಟ್ಟಲು ಸಾಧ್ಯವಿಲ್ಲ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

andolana

Recent Posts

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

2 hours ago

ಓದುಗರ ಪತ್ರ: ಜನರ ನಿರೀಕ್ಷೆಗಳಿಂದ ದೂರವಾಗುತ್ತಿರುವ ಶಾಸನಸಭೆಗಳು

ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…

2 hours ago

ಓದುಗರ ಪತ್ರ: ಬೇಸರ ತರಿಸಿದ ಜನಪ್ರತಿನಿಧಿಗಳ ವರ್ತನೆ

ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…

2 hours ago

ಸೈನ್ಯ ಯುದ್ಧ ಮಾಡುತ್ತದೆ, ತೀರ್ಮಾನ ಸರ್ಕಾರ ಮಾಡಬೇಕು…!

ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…

2 hours ago

ಇಂದು ಶನಿವಾರಸಂತೆ ಬಸ್ ನಿಲ್ದಾಣ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…

2 hours ago

ಮಡಹಳ್ಳಿ ಬಳಿಯ ಅಕ್ರಮ ಕ್ರಷರ್‌ನಿಂದ ಜನತೆ ಹೈರಾಣ

ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…

2 hours ago