Andolana originals

ಓದುಗರ ಪತ್ರ: ಭ್ರೂಣ ಹತ್ಯೆಗಳಿಗೆ ಕಡಿವಾಣ ಎಂದು?

ಒಂಬತ್ತು ತಿಂಗಳ ಹಿಂದೆಯಷ್ಟೇ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ನಡೆದಿದೆ ಎನ್ನಲಾದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.

ಈ ಪ್ರಕರಣ ಮಾಸುವ ಮುನ್ನವೇ ಈಗ ಮತ್ತೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯೊಂದರಲ್ಲಿ ಹೆಣ್ಣು ಭ್ರೂಣ ಹತ್ಯೆಯ ಜಾಲ ಪತ್ತೆ ಯಾಗಿರುವುದು ಆತಂಕ ಸೃಷ್ಟಿಸಿದೆ.

ಕಳೆದ ಬಾರಿ ಮಂಡ್ಯ ಜಿಲ್ಲೆಯ ಪಾಂಡವಪುರದ ಆರೋಗ್ಯಾಧಿಕಾರಿಗಳ ಕಚೇರಿಯ ಹಿಂಭಾಗವೇ ಭ್ರೂಣ ಹತ್ಯೆಯ ಜಾಲ ಪತ್ತೆಯಾಗಿತ್ತು. ಇಷ್ಟಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಕಟ್ಟುನಿಟ್ಟಿನ ಕ್ರಮವಹಿಸದ ಪರಿಣಾಮ ಈಗ ಮಂಡ್ಯ ಜಿಲ್ಲೆಯಲ್ಲಿಯೇ ಅತಿಹೆಚ್ಚು ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ದಾಖಲಾಗಿರುವುದು ವಿಷಾದಕರ ಸಂಗತಿ.

ರಾಜ್ಯದ 14 ಜಿಲ್ಲೆಗಳಲ್ಲಿ 6 ವರ್ಷದೊಳಗಿನ ಹೆಣ್ಣು ಮಕ್ಕಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ದಾಖಲಾಗಿದೆ. ಬಾಗಲಕೋಟೆ, ವಿಜಯಪುರ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಪ್ರತಿ 1000 ಗಂಡು ಮಕ್ಕಳಿಗೆ ಕೇವಲ 624 ರಿಂದ 750 ಹೆಣ್ಣು ಮಕ್ಕಳ ಸರಾಸರಿ ಇದೆ ಎಂಬುದಾಗಿ ವರದಿಗಳು ಹೇಳುತ್ತಿವೆ. 2011ರ ಜನಗಣತಿ ಪ್ರಕಾರ ಪ್ರತಿ 1000 ಗಂಡು ಮಕ್ಕಳಿಗೆ 924 ಹೆಣ್ಣುಮಕ್ಕಳ ಸರಾಸರಿ ಇದ್ದದ್ದು ಈಗ ಇಳಿಕೆಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರೊಬ್ಬರು, ನಾವು ಎಷ್ಟೇ ಕಠಿಣ ಕ್ರಮಗಳನ್ನು ಕೈಗೊಂಡರೂ ಭ್ರೂಣ ಹತ್ಯೆಗಳು ಮರುಕಳುಹಿಸುತ್ತಿವೆ ಎಂದು ಬೇಜವಾಬ್ದಾರಿಯ ಮತ್ತು ಅಸಹಾಯಕತೆಯ ಹೇಳಿಕೆ ನೀಡಿರುವುದು ವಿಷಾದನೀಯ.
ಈಗಾಗಲೇ ದಾಖಲಾಗಿರುವ ಇಂತಹ ಪ್ರಕರಣಗಳ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸದ ಹೊರತಾಗಿ ಭ್ರೂಣ ಹತ್ಯೆಗಳನ್ನು ತಡೆಗಟ್ಟಲು ಸಾಧ್ಯವಿಲ್ಲ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

andolana

Recent Posts

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

2 mins ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

14 mins ago

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

2 hours ago

ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎನ್‌ಟಿಎ

ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಅಂಗಳಕ್ಕೆ ತಲುಪಿದ ಅಧಿಕಾರ ಹಂಚಿಕೆ ಮಾತು

ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…

2 hours ago

ಪಾರಂಪರಿಕ ಕಟ್ಟಡ ಸಂರಕ್ಷಿಸಿ.. ಪರಂಪರೆ ಉಳಿಸಿ..!

ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…

2 hours ago