ಒಂಬತ್ತು ತಿಂಗಳ ಹಿಂದೆಯಷ್ಟೇ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ನಡೆದಿದೆ ಎನ್ನಲಾದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.
ಈ ಪ್ರಕರಣ ಮಾಸುವ ಮುನ್ನವೇ ಈಗ ಮತ್ತೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯೊಂದರಲ್ಲಿ ಹೆಣ್ಣು ಭ್ರೂಣ ಹತ್ಯೆಯ ಜಾಲ ಪತ್ತೆ ಯಾಗಿರುವುದು ಆತಂಕ ಸೃಷ್ಟಿಸಿದೆ.
ಕಳೆದ ಬಾರಿ ಮಂಡ್ಯ ಜಿಲ್ಲೆಯ ಪಾಂಡವಪುರದ ಆರೋಗ್ಯಾಧಿಕಾರಿಗಳ ಕಚೇರಿಯ ಹಿಂಭಾಗವೇ ಭ್ರೂಣ ಹತ್ಯೆಯ ಜಾಲ ಪತ್ತೆಯಾಗಿತ್ತು. ಇಷ್ಟಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಕಟ್ಟುನಿಟ್ಟಿನ ಕ್ರಮವಹಿಸದ ಪರಿಣಾಮ ಈಗ ಮಂಡ್ಯ ಜಿಲ್ಲೆಯಲ್ಲಿಯೇ ಅತಿಹೆಚ್ಚು ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ದಾಖಲಾಗಿರುವುದು ವಿಷಾದಕರ ಸಂಗತಿ.
ರಾಜ್ಯದ 14 ಜಿಲ್ಲೆಗಳಲ್ಲಿ 6 ವರ್ಷದೊಳಗಿನ ಹೆಣ್ಣು ಮಕ್ಕಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ದಾಖಲಾಗಿದೆ. ಬಾಗಲಕೋಟೆ, ವಿಜಯಪುರ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಪ್ರತಿ 1000 ಗಂಡು ಮಕ್ಕಳಿಗೆ ಕೇವಲ 624 ರಿಂದ 750 ಹೆಣ್ಣು ಮಕ್ಕಳ ಸರಾಸರಿ ಇದೆ ಎಂಬುದಾಗಿ ವರದಿಗಳು ಹೇಳುತ್ತಿವೆ. 2011ರ ಜನಗಣತಿ ಪ್ರಕಾರ ಪ್ರತಿ 1000 ಗಂಡು ಮಕ್ಕಳಿಗೆ 924 ಹೆಣ್ಣುಮಕ್ಕಳ ಸರಾಸರಿ ಇದ್ದದ್ದು ಈಗ ಇಳಿಕೆಯಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರೊಬ್ಬರು, ನಾವು ಎಷ್ಟೇ ಕಠಿಣ ಕ್ರಮಗಳನ್ನು ಕೈಗೊಂಡರೂ ಭ್ರೂಣ ಹತ್ಯೆಗಳು ಮರುಕಳುಹಿಸುತ್ತಿವೆ ಎಂದು ಬೇಜವಾಬ್ದಾರಿಯ ಮತ್ತು ಅಸಹಾಯಕತೆಯ ಹೇಳಿಕೆ ನೀಡಿರುವುದು ವಿಷಾದನೀಯ.
ಈಗಾಗಲೇ ದಾಖಲಾಗಿರುವ ಇಂತಹ ಪ್ರಕರಣಗಳ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸದ ಹೊರತಾಗಿ ಭ್ರೂಣ ಹತ್ಯೆಗಳನ್ನು ತಡೆಗಟ್ಟಲು ಸಾಧ್ಯವಿಲ್ಲ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…
ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್ನಲ್ಲಿ ನಡೆದ…
ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…