Andolana originals

ಓದುಗರ ಪತ್ರ: ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಯಾವಾಗ?

ಆಗಸ್ಟ್ 27ರಂದು ನಡೆದ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಭಾಷಾಂತರ ಮಾಡಿದ್ದ ಪ್ರಶ್ನೆಗಳ ಪೈಕಿ ಕೆಲವು ಪ್ರಶ್ನೆಗಳು ತಪ್ಪಾಗಿ ತರ್ಜುಮೆಗೊಂಡಿದ್ದರಿಂದ ಅಭ್ಯರ್ಥಿಗಳು ಗೊಂದಲಕ್ಕೀಡಾಗಿ ಸರಿಯಾಗಿ ಉತ್ತರ ಬರೆಯಲಾಗಲಿಲ್ಲ. ಅನೇಕ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಪ್ರಶ್ನೆ ಪತ್ರಿಕೆ ವಿತರಿಸದೆ ನಿರ್ಲಕ್ಷ ತೋರಲಾಗಿದೆ. ಅಲ್ಲದೆ ಉದ್ದೇಶ ಪೂರ್ವಕವಾಗಿಯೇ ಸಮಯ ವ್ಯರ್ಥ ಮಾಡಿರುವುದೂ ಬೆಳಕಿಗೆ ಬಂದಿದ್ದು, ಕೆಲ ಅಭ್ಯರ್ಥಿಗಳು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕೆಪಿಸಿಸಿ ಪರೀಕ್ಷೆಗಳನ್ನು ಎದುರಿಸಲು ಅಭ್ಯರ್ಥಿಗಳು ಹಗಲು-ರಾತ್ರಿ ಎನ್ನದೇ ಶ್ರಮಿಸಿರುತ್ತಾರೆ. ನೂರಾರು ಕಿ.ಮೀ. ಪ್ರಯಾಣಿಸಿ ಪರೀಕ್ಷಾ ಕೇಂದ್ರಗಳಿಗೆ ಬರುತ್ತಾರೆ. ಇಂತಹ ಪರೀಕ್ಷೆಗಳನ್ನು ನಡೆಸುವಾಗ ಪರೀಕ್ಷಾ ಪ್ರಾಧಿಕಾರವು ಎಚ್ಚರಿಕೆ ಯಿಂದಿರಬೇಕು. ಏಕೆಂದರೆ ಕೆಲ ಅಧಿಕಾರಿಗಳ ಬೇಜವಾಬ್ದಾರಿತನದ ಇಂತಹ ತಪ್ಪುಗಳು ಲಕ್ಷಾಂತರ ಅಭ್ಯರ್ಥಿಗಳ ಕನಸನ್ನು ನುಚ್ಚು ನೂರಾಗಿಸಬಹುದು. ಆದ್ದರಿಂದ ಬೇಜವಾಬ್ದಾರಿ ತೋರಿದ ಅಧಿಕಾರಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು.
-ಜಿ.ಎನ್.ಕಾರ್ತಿಕ್, ಪರೀಕ್ಷೆ ಬರೆದ ಅಭ್ಯರ್ಥಿ, ಗುಂಡ್ಲುಪೇಟೆ ತಾ.

andolana

Recent Posts

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

9 mins ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

21 mins ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

51 mins ago

ನಾಳೆ,ನಾಡಿದ್ದು ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…

1 hour ago

ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರು ಎಣಿಕೆ : ನಂಜೇಗೌಡ ವಿನ್ನರ್‌ ಎಂದ ಸುಪ್ರೀಂ

ಬೆಂಗಳೂರು : ಕೋಲಾರ ಜಿಲ್ಲೆ, ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಎನ್ ನಂಜೇಗೌಡ ಅವರು…

1 hour ago

ರತ್ನಪುರಿ | ನಾಳೆಯಿಂದ ಹಿಂದೂ ಮುಸ್ಲಿಂ ಭಾವೈಕ್ಯತೆ ಜಾತ್ರೆ

ಹುಣಸೂರು : ರಾಜ್ಯದಲ್ಲೇ ಜಾನುವಾರುಗಳ ಪ್ರಮುಖ ಜಾತ್ರೆಯಲ್ಲೊಂದಾದ ಹುಣಸೂರು ತಾಲೂಕಿನ ರತ್ನಪುರಿ(ದರ್ಗ)ಯಲ್ಲಿ ಹಿಂದೂ-ಮುಸ್ಲಿಮರ ಭಾವೈಕ್ಯತೆ ಮೆರೆವ ಶ್ರೀ ಅಂಜನೇಯ ಸ್ವಾಮಿಯ…

2 hours ago