ಆಗಸ್ಟ್ 27ರಂದು ನಡೆದ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಭಾಷಾಂತರ ಮಾಡಿದ್ದ ಪ್ರಶ್ನೆಗಳ ಪೈಕಿ ಕೆಲವು ಪ್ರಶ್ನೆಗಳು ತಪ್ಪಾಗಿ ತರ್ಜುಮೆಗೊಂಡಿದ್ದರಿಂದ ಅಭ್ಯರ್ಥಿಗಳು ಗೊಂದಲಕ್ಕೀಡಾಗಿ ಸರಿಯಾಗಿ ಉತ್ತರ ಬರೆಯಲಾಗಲಿಲ್ಲ. ಅನೇಕ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಪ್ರಶ್ನೆ ಪತ್ರಿಕೆ ವಿತರಿಸದೆ ನಿರ್ಲಕ್ಷ ತೋರಲಾಗಿದೆ. ಅಲ್ಲದೆ ಉದ್ದೇಶ ಪೂರ್ವಕವಾಗಿಯೇ ಸಮಯ ವ್ಯರ್ಥ ಮಾಡಿರುವುದೂ ಬೆಳಕಿಗೆ ಬಂದಿದ್ದು, ಕೆಲ ಅಭ್ಯರ್ಥಿಗಳು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕೆಪಿಸಿಸಿ ಪರೀಕ್ಷೆಗಳನ್ನು ಎದುರಿಸಲು ಅಭ್ಯರ್ಥಿಗಳು ಹಗಲು-ರಾತ್ರಿ ಎನ್ನದೇ ಶ್ರಮಿಸಿರುತ್ತಾರೆ. ನೂರಾರು ಕಿ.ಮೀ. ಪ್ರಯಾಣಿಸಿ ಪರೀಕ್ಷಾ ಕೇಂದ್ರಗಳಿಗೆ ಬರುತ್ತಾರೆ. ಇಂತಹ ಪರೀಕ್ಷೆಗಳನ್ನು ನಡೆಸುವಾಗ ಪರೀಕ್ಷಾ ಪ್ರಾಧಿಕಾರವು ಎಚ್ಚರಿಕೆ ಯಿಂದಿರಬೇಕು. ಏಕೆಂದರೆ ಕೆಲ ಅಧಿಕಾರಿಗಳ ಬೇಜವಾಬ್ದಾರಿತನದ ಇಂತಹ ತಪ್ಪುಗಳು ಲಕ್ಷಾಂತರ ಅಭ್ಯರ್ಥಿಗಳ ಕನಸನ್ನು ನುಚ್ಚು ನೂರಾಗಿಸಬಹುದು. ಆದ್ದರಿಂದ ಬೇಜವಾಬ್ದಾರಿ ತೋರಿದ ಅಧಿಕಾರಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು.
-ಜಿ.ಎನ್.ಕಾರ್ತಿಕ್, ಪರೀಕ್ಷೆ ಬರೆದ ಅಭ್ಯರ್ಥಿ, ಗುಂಡ್ಲುಪೇಟೆ ತಾ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…