ಆಗಸ್ಟ್ 27ರಂದು ನಡೆದ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಭಾಷಾಂತರ ಮಾಡಿದ್ದ ಪ್ರಶ್ನೆಗಳ ಪೈಕಿ ಕೆಲವು ಪ್ರಶ್ನೆಗಳು ತಪ್ಪಾಗಿ ತರ್ಜುಮೆಗೊಂಡಿದ್ದರಿಂದ ಅಭ್ಯರ್ಥಿಗಳು ಗೊಂದಲಕ್ಕೀಡಾಗಿ ಸರಿಯಾಗಿ ಉತ್ತರ ಬರೆಯಲಾಗಲಿಲ್ಲ. ಅನೇಕ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಪ್ರಶ್ನೆ ಪತ್ರಿಕೆ ವಿತರಿಸದೆ ನಿರ್ಲಕ್ಷ ತೋರಲಾಗಿದೆ. ಅಲ್ಲದೆ ಉದ್ದೇಶ ಪೂರ್ವಕವಾಗಿಯೇ ಸಮಯ ವ್ಯರ್ಥ ಮಾಡಿರುವುದೂ ಬೆಳಕಿಗೆ ಬಂದಿದ್ದು, ಕೆಲ ಅಭ್ಯರ್ಥಿಗಳು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕೆಪಿಸಿಸಿ ಪರೀಕ್ಷೆಗಳನ್ನು ಎದುರಿಸಲು ಅಭ್ಯರ್ಥಿಗಳು ಹಗಲು-ರಾತ್ರಿ ಎನ್ನದೇ ಶ್ರಮಿಸಿರುತ್ತಾರೆ. ನೂರಾರು ಕಿ.ಮೀ. ಪ್ರಯಾಣಿಸಿ ಪರೀಕ್ಷಾ ಕೇಂದ್ರಗಳಿಗೆ ಬರುತ್ತಾರೆ. ಇಂತಹ ಪರೀಕ್ಷೆಗಳನ್ನು ನಡೆಸುವಾಗ ಪರೀಕ್ಷಾ ಪ್ರಾಧಿಕಾರವು ಎಚ್ಚರಿಕೆ ಯಿಂದಿರಬೇಕು. ಏಕೆಂದರೆ ಕೆಲ ಅಧಿಕಾರಿಗಳ ಬೇಜವಾಬ್ದಾರಿತನದ ಇಂತಹ ತಪ್ಪುಗಳು ಲಕ್ಷಾಂತರ ಅಭ್ಯರ್ಥಿಗಳ ಕನಸನ್ನು ನುಚ್ಚು ನೂರಾಗಿಸಬಹುದು. ಆದ್ದರಿಂದ ಬೇಜವಾಬ್ದಾರಿ ತೋರಿದ ಅಧಿಕಾರಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು.
-ಜಿ.ಎನ್.ಕಾರ್ತಿಕ್, ಪರೀಕ್ಷೆ ಬರೆದ ಅಭ್ಯರ್ಥಿ, ಗುಂಡ್ಲುಪೇಟೆ ತಾ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…