Andolana originals

ಓದುಗರ ಪತ್ರ| ದೇಶದಲ್ಲಿ ಹೆಣ್ಣುಮಕ್ಕಳಿಗೆ ಎಲ್ಲಿದೆ ಸುರಕ್ಷತೆ?

ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ದೇಶದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಇದೆಯೇ ಎಂಬ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ.

ಈ ಕೃತ್ಯವನ್ನು ಖಂಡಿಸಿ ದೇಶದ ಹಲವೆಡೆ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೊಲ್ಕತ್ತಾದ ಹೈಕೋರ್ಟ್ ಕೂಡ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದು, ಸೂಕ್ತ ತನಿಖೆಗೆ ಆದೇಶಿಸಿದೆ.

ಇದರ ಬೆನ್ನಲ್ಲೆ ಕೊಲ್ಕತ್ತಾದಲ್ಲಿ ಪ್ರತಿಭಟನೆ ನಿರತ JUST, ವೈದ್ಯರ ಮೇಲೆ ಹಾಗೂ ಆಸ್ಪತ್ರೆಯ ಮೇಲೆ ” for ಕಿಡಿಗೇಡಿಗಳ ಗುಂಪೊಂದು ದಾಳಿ ನಡೆಸಿದ್ದು, ಆಸ್ಪತ್ರೆಯನ್ನು ಧ್ವಂಸ ಮಾಡಿರುವುದಲ್ಲದೇ ವೈದ್ಯರ ಮೇಲೆಯೂ ಹಲ್ಲೆ ಮಾಡಿದೆ. ಈ ಘಟನೆಗಳನ್ನು ನೋಡಿದರೆ, ದೇಶದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲವೇನೋ ಅನಿಸುತ್ತದೆ. ಅಪ್ರಾಪ್ರ ವಯಸ್ಸಿನ ಬಾಲಕಿಯರಿಂದ ಹಿಡಿದು ಜೀವ ಉಳಿಸುವ ವೈದ್ಯರನ್ನೂ ಬಿಡದೆ ಅತ್ಯಾಚಾರ ಮಾಡಿ ಕೊಲೆ ಮಾಡುವಂತಹ ದುಷ್ಕೃತ್ಯಗಳು ಈ ದೇಶದಲ್ಲಿ ನಡೆಯುತ್ತಿವೆ ಎಂದರೆ ಈ ದೇಶದ ಆಡಳಿತ ವ್ಯವಸ್ಥೆ ಮಹಿಳೆಯರಿಗೆ ಎಷ್ಟರ ಮಟ್ಟಿಗೆ ರಕ್ಷಣೆ ಒದಗಿಸಿದೆ ಎಂಬುದು ತಿಳಿಯುತ್ತದೆ.

ಹೆಣ್ಣು ಮಕ್ಕಳು ತಾವು ಓದುವ, ಕೆಲಸ ಮಾಡುವ ಸ್ಥಳಗಳಲ್ಲಿಯೇ ದೌರ್ಜನ್ಯಗಳನ್ನು ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಕೌಟುಂಬಿಕವಾಗಿಯೂ ಅವರು ಅನೇಕ ಕಿರುಕುಳಗಳನ್ನು ಎದುರಿಸುತ್ತಿದ್ದಾರೆ. ಇದಕ್ಕೆ ಇತ್ತೀಚೆಗೆ ರಾಜಸ್ಥಾನದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಬೈಕ್‌ನಲ್ಲಿ ಕಟ್ಟಿ ಗ್ರಾಮದ ಬೀದಿ ಬೀದಿಗಳಲ್ಲಿ ಎಳೆದಾಡಿ ಹಿಂಸಿಸಿರುವ ಘಟನೆಯೇ ಸಾಕ್ಷಿ. ಇಂತಹ ದೌರ್ಜನ್ಯ ಪ್ರಕರಣಗಳು ನಾಗರಿಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದ್ದು, ಸರ್ಕಾರ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕಿದೆ. T

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Recent Posts

ಹಲವು ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ ದಿಢೀರ್‌ ರದ್ದು?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…

3 mins ago

ಮಹದೇಶ್ವರ ಬೆಟ್ಟ: ಪೌರಕಾರ್ಮಿಕರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎ.ಈ.ರಘು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…

54 mins ago

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

5 hours ago

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…

5 hours ago

ಓದುಗರ ಪತ್ರ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸಿ

ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…

5 hours ago

ಓದುಗರ ಪತ್ರ: ಬ್ಯಾಂಕ್ ಕನಿಷ್ಠ ಮೊತ್ತ ರದ್ದಾಗಲಿ

ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…

5 hours ago