Andolana originals

ಓದುಗರ ಪತ್ರ: ಹುಲಿಗಳ ಸಾವಿಗೆ ಹೊಣೆ ಯಾರು?

ಮಲೆ ಮಹದೇಶ್ವರ ವನ್ಯಧಾಮದ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಅಸಹಜವಾಗಿ ಸಾವಿಗೀಡಾಗಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಅಳಿವಿನಂಚಿನಲ್ಲಿರುವ ಪ್ರಾಣಿಗಳ ಸಂರಕ್ಷಣೆಗಾಗಿ ಇಂದಿರಾ ಗಾಂಧಿ ಅವರು ಪ್ರಧಾನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ನಮ್ಮ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಯಿತು. ರಾಜ್ಯದ ಅಭಯಾರಣ್ಯಗಳಲ್ಲಿ ಒಟ್ಟು ೫೬೩ ಹುಲಿಗಳಿದ್ದು, ಹುಲಿ ಸಂತತಿಯಲ್ಲಿ ಕರ್ನಾಟಕ ದೇಶದಲ್ಲೇ ೨ನೇ ಸ್ಥಾನದಲ್ಲಿದೆ.

ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ ೫ ಹುಲಿಗಳು ವಿಷ ಪ್ರಾಶನಕ್ಕೆ ಬಲಿಯಾಗಿವೆ ಎಂದು ಹೇಳಲಾಗುತ್ತಿದೆ. ಇದು ರಾಜ್ಯದ ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ನಡೆದಿರುವ ಅತಿ ದೊಡ್ಡ ದುರಂತ. ಇದು ಅರಣ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನವನ್ನು ತೋರಿಸುತ್ತದೆ. ಮಲೆ ಮಹದೇಶ್ವರ ವನ್ಯ ಜೀವಿ ಧಾಮ ಹುಲಿ ಸಂತತಿ ಹೆಚ್ಚಳಕ್ಕೆ ಪೂರಕವಾದ ವಾತಾವರಣವನ್ನು ಹೊಂದಿದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಹುಲಿಗಳ ಸಾವಿಗೆ ಕಾರಣಗಳನ್ನು ಪತ್ತೆಹಚ್ಚಬೇಕು, ಒಂದು ವೇಳೆ ವಿಷಪ್ರಾಶನ ಮಾಡಿದ್ದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು.

 -ಮಹಾಂತೇಶ್, ಬಳ್ಳೂರುಹುಂಡಿ, ನಂಜನಗೂಡು ತಾಲ್ಲೂಕು

ಆಂದೋಲನ ಡೆಸ್ಕ್

Recent Posts

ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಡಾ.ರಾಜ್‌ಕುಮಾರ್‌ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇತ್ತೀಚೆಗಷ್ಟೇ…

1 hour ago

ನನ್ನ ಅಜ್ಜನ ರೀತಿ ಅಜಾತಶತ್ರು ಆಗುತ್ತೇನೆ: ನೂತನ ಶಾಸಕ ಸಮರ್ಥ್‌ ಶಾಮನೂರು

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್‌ ಶಾಮನೂರು ತಮ್ಮ ಗೆಲುವಿನ…

1 hour ago

ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ನಡೆಯಲಿಲ್ಲ, ನಾವೇ ಗೆದ್ದಿದ್ದೇವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…

3 hours ago

ಖಾಲಿ ಕಾಂಪೌಂಡ್‌ಗಳ ಮುಂದೆ ನಿಂತು ಮೂತ್ರ ವಿಸರ್ಜನೆ ಮಾಡುವವರೇ ಎಚ್ಚರ ಎಚ್ಚರ.

ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…

3 hours ago

ಜನಗಣತಿ ಮಾಡುವ ವೇಳೆಯೇ ಹೃದಯಾಘಾತ: ಶಿಕ್ಷಕ ಸಾವು

ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…

4 hours ago

ಓದುಗರ ಪತ್ರ: ಪಂಚ.. ತಂತ್ರ !

ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

6 hours ago