ಓದುಗರ ಪತ್ರ
ಮಲೆ ಮಹದೇಶ್ವರ ವನ್ಯಧಾಮದ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಅಸಹಜವಾಗಿ ಸಾವಿಗೀಡಾಗಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಅಳಿವಿನಂಚಿನಲ್ಲಿರುವ ಪ್ರಾಣಿಗಳ ಸಂರಕ್ಷಣೆಗಾಗಿ ಇಂದಿರಾ ಗಾಂಧಿ ಅವರು ಪ್ರಧಾನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ನಮ್ಮ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಯಿತು. ರಾಜ್ಯದ ಅಭಯಾರಣ್ಯಗಳಲ್ಲಿ ಒಟ್ಟು ೫೬೩ ಹುಲಿಗಳಿದ್ದು, ಹುಲಿ ಸಂತತಿಯಲ್ಲಿ ಕರ್ನಾಟಕ ದೇಶದಲ್ಲೇ ೨ನೇ ಸ್ಥಾನದಲ್ಲಿದೆ.
ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ ೫ ಹುಲಿಗಳು ವಿಷ ಪ್ರಾಶನಕ್ಕೆ ಬಲಿಯಾಗಿವೆ ಎಂದು ಹೇಳಲಾಗುತ್ತಿದೆ. ಇದು ರಾಜ್ಯದ ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ನಡೆದಿರುವ ಅತಿ ದೊಡ್ಡ ದುರಂತ. ಇದು ಅರಣ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನವನ್ನು ತೋರಿಸುತ್ತದೆ. ಮಲೆ ಮಹದೇಶ್ವರ ವನ್ಯ ಜೀವಿ ಧಾಮ ಹುಲಿ ಸಂತತಿ ಹೆಚ್ಚಳಕ್ಕೆ ಪೂರಕವಾದ ವಾತಾವರಣವನ್ನು ಹೊಂದಿದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಹುಲಿಗಳ ಸಾವಿಗೆ ಕಾರಣಗಳನ್ನು ಪತ್ತೆಹಚ್ಚಬೇಕು, ಒಂದು ವೇಳೆ ವಿಷಪ್ರಾಶನ ಮಾಡಿದ್ದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು.
-ಮಹಾಂತೇಶ್, ಬಳ್ಳೂರುಹುಂಡಿ, ನಂಜನಗೂಡು ತಾಲ್ಲೂಕು
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…