ಓದುಗರ ಪತ್ರ
ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗಲೇ ದಿಲ್ಲಿಯ ಚಾಣಕ್ಯಪುರಿಯಲ್ಲಿ ಆ.೪ರಂದು ಬೆಳಿಗ್ಗೆ ವಾಯು ವಿಹಾರ ಮಾಡುತ್ತಿದ್ದ ಸಂಸದೆ ತಮಿಳು ನಾಡಿನ ಆರ್.ಸುಧಾ ಅವರ ಸರವನ್ನು ಕಳ್ಳರು ಅಪಹರಿಸಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ. ರಾಜಧಾನಿ ದಿಲ್ಲಿಯಲ್ಲೇ ಜನಪ್ರತಿನಿಧಿಗಳ ಸರವನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದರೆ ಜನ ಸಾಮಾನ್ಯರ ಪಾಡೇನು?
ಮಹಾತ್ಮ ಗಾಂಧಿ ಹೇಳಿದಂತೆ, ಮಧ್ಯ ರಾತ್ರಿ ಯಲ್ಲಿ ಯಾವ ಆತಂಕವೂ ಇಲ್ಲದೆ ಮಹಿಳೆಯರು ಓಡಾಡುವ ಕಾಲ ಬರುವುದು ಯಾವಾಗ? ಭದ್ರತಾ ವ್ಯವಸ್ಥೆ ಆಧು ನೀಕರಣಗೊಂಡಿದ್ದರೂ ಅಪರಾಧ ಸಂಖ್ಯೆಗಳು ಹೆಚ್ಚುತ್ತಲೇ ಇವೆ. ಉದ್ಯೋಗ ಅವಕಾಶಗಳು ಹೆಚ್ಚುತ್ತಲೇ ಇದ್ದರೂ ನಿರುದ್ಯೋಗ ಸಮಸ್ಯೆಗಳು ಕಾಡುತ್ತಲೇ ಇವೆ.ಇವಕ್ಕೆ ಪರಿಹಾರವೇನು? ಸರ್ಕಾರಗಳು ಈ ಕುರಿತು ಚಿಂತಿಸುವ ಅಗತ್ಯವಿದೆ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…