ವಿಶ್ವವನ್ನೇ ಬೆಚ್ಚಿ ಬೀಳಿಸಿದ, ಅಪಾರ ಸಾವು-ನೋವುಗಳಿಗೆ ಕಾರಣವಾಗಿದ್ದ ಕೋವಿಡ್-19 ಸೋಂಕು ಈಗ ಮತ್ತೊಮ್ಮೆ ಜನರನ್ನು ಆತಂಕಕ್ಕೀಡು ಮಾಡಿದೆ.
ಕೋವಿಡ್ ಸೋಂಕು ತಡೆಗಟ್ಟಲು ಇಂಗ್ಲೆಂಡ್ ಮೂಲದ ಡ್ರಗ್ ಮೇಜರ್ ಅಸ್ಟ್ರಾಜೆನೆಕಾ ಮತ್ತು ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯವು ಅಭಿವೃದ್ಧಿಪಡಿಸಿದ ಹಾಗೂ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಂಗೀಕಾರ ಪಡೆದಿದ್ದ ‘ಕೋವಿಶೀಲ್’ ಲಸಿಕೆ ಅಡ್ಡಪರಿಣಾಮ ಬೀರಬಲ್ಲದು ಎಂಬುದಾಗಿ ಸ್ವತಃ ಕಂಪೆನಿಯೇ ಒಪ್ಪಿಕೊಂಡಿದ್ದು, ಲಸಿಕೆಯನ್ನು ವಾಪಸ್ ಪಡೆದಿದೆ.
ಇದರಿಂದ ಲಸಿಕೆ ಪಡೆದವರಲ್ಲಿ ಆತಂಕ ಉಂಟಾಗಿದೆ. ಕೋವಿಶೀಲ್ಡ್ ಲಸಿಕೆಯನ್ನು ತೆಗೆದುಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆಯೇ ಶಿಫಾರಸು ಮಾಡಿತ್ತು. ಈ ನಂಬಿಕೆಯಿಂದಾಗಿ ಜನರೂ ಲಸಿಕೆ ಪಡೆದಿದ್ದರು. ಆದರೆ ಈಗ ಈ ಲಸಿಕೆ ಜೀವಕ್ಕೆ ಅಪಾಯಕಾರಿ ಎನ್ನಲಾಗುತ್ತಿದೆ.
ದೇಶದ ಶೇ.70ರಷ್ಟು ಮಂದಿ ಕೋವಿಶೀಲ್ಡ್ ಲಸಿಕೆಯನ್ನೇ ಪಡೆದಿದ್ದಾರೆ. ಒಂದು ವೇಳೆ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದರೆ ಅದಕ್ಕೆ ಯಾರು ಹೊಣೆ? ವಿಶ್ವ ಆರೋಗ್ಯ ಸಂಸ್ಥೆಯೇ ಈ ಲಸಿಕೆಯನ್ನು ಶಿಫಾರಸು ಮಾಡಿದ್ದರಿಂದ ಜನರ ಪ್ರಾಣಕ್ಕೆ ಅಪಾಯವಾದರೆ ಅದರ ಜವಾಬ್ದಾರಿಯನ್ನು ವಿಶ್ವಸಂಸ್ಥೆಯೇ ಹೊರಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…