ವಿಶ್ವವನ್ನೇ ಬೆಚ್ಚಿ ಬೀಳಿಸಿದ, ಅಪಾರ ಸಾವು-ನೋವುಗಳಿಗೆ ಕಾರಣವಾಗಿದ್ದ ಕೋವಿಡ್-19 ಸೋಂಕು ಈಗ ಮತ್ತೊಮ್ಮೆ ಜನರನ್ನು ಆತಂಕಕ್ಕೀಡು ಮಾಡಿದೆ.
ಕೋವಿಡ್ ಸೋಂಕು ತಡೆಗಟ್ಟಲು ಇಂಗ್ಲೆಂಡ್ ಮೂಲದ ಡ್ರಗ್ ಮೇಜರ್ ಅಸ್ಟ್ರಾಜೆನೆಕಾ ಮತ್ತು ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯವು ಅಭಿವೃದ್ಧಿಪಡಿಸಿದ ಹಾಗೂ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಂಗೀಕಾರ ಪಡೆದಿದ್ದ ‘ಕೋವಿಶೀಲ್’ ಲಸಿಕೆ ಅಡ್ಡಪರಿಣಾಮ ಬೀರಬಲ್ಲದು ಎಂಬುದಾಗಿ ಸ್ವತಃ ಕಂಪೆನಿಯೇ ಒಪ್ಪಿಕೊಂಡಿದ್ದು, ಲಸಿಕೆಯನ್ನು ವಾಪಸ್ ಪಡೆದಿದೆ.
ಇದರಿಂದ ಲಸಿಕೆ ಪಡೆದವರಲ್ಲಿ ಆತಂಕ ಉಂಟಾಗಿದೆ. ಕೋವಿಶೀಲ್ಡ್ ಲಸಿಕೆಯನ್ನು ತೆಗೆದುಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆಯೇ ಶಿಫಾರಸು ಮಾಡಿತ್ತು. ಈ ನಂಬಿಕೆಯಿಂದಾಗಿ ಜನರೂ ಲಸಿಕೆ ಪಡೆದಿದ್ದರು. ಆದರೆ ಈಗ ಈ ಲಸಿಕೆ ಜೀವಕ್ಕೆ ಅಪಾಯಕಾರಿ ಎನ್ನಲಾಗುತ್ತಿದೆ.
ದೇಶದ ಶೇ.70ರಷ್ಟು ಮಂದಿ ಕೋವಿಶೀಲ್ಡ್ ಲಸಿಕೆಯನ್ನೇ ಪಡೆದಿದ್ದಾರೆ. ಒಂದು ವೇಳೆ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದರೆ ಅದಕ್ಕೆ ಯಾರು ಹೊಣೆ? ವಿಶ್ವ ಆರೋಗ್ಯ ಸಂಸ್ಥೆಯೇ ಈ ಲಸಿಕೆಯನ್ನು ಶಿಫಾರಸು ಮಾಡಿದ್ದರಿಂದ ಜನರ ಪ್ರಾಣಕ್ಕೆ ಅಪಾಯವಾದರೆ ಅದರ ಜವಾಬ್ದಾರಿಯನ್ನು ವಿಶ್ವಸಂಸ್ಥೆಯೇ ಹೊರಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…