ಓದುಗರ ಪತ್ರ
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ ಎಂಬುದು ಸಾರ್ವಜನಿಕರಲ್ಲಿ ಬೇಸರ ಮೂಡಿಸಿದೆ. ಆದರೆ, ಇದು ಸಹಜ ಬೆಳವಣಿಗೆ. ಅಭಿಮನ್ಯುವಿನ ನೇತೃತ್ವದಲ್ಲಿ ಗಜಪಡೆ ಮೆರವಣಿಗೆ ಹೊರಟರೆ, ನೋಡುಗರ ಕಣ್ಣಿಗೆ ಹಬ್ಬವಾಗುತ್ತಿತ್ತು.
ಅಭಿಮನ್ಯು ದಸರೆಯಲ್ಲಿ ಮಾತ್ರವಲ್ಲದೆ, ಕಾಡಾನೆಗಳು, ಹುಲಿಗಳ ಸೆರೆ ಕಾರ್ಯಾಚರಣೆಯಲ್ಲಿಯೂ ಪಾಲ್ಗೊಳ್ಳುತ್ತಿದ್ದುದು ಗಮನಾರ್ಹ. ಅಭಿಮನ್ಯುವನ್ನು ದಸರಾ ಕಾರ್ಯಭಾರದಿಂದ ಬಿಡುಗಡೆ ಮಾಡುತ್ತಿರುವುದಕ್ಕೆ ವಯಸ್ಸಿನ ಕಾರಣ ನೀಡಲಾಗಿದೆ. ಅಲ್ಲದೆ, ಸುಪ್ರೀಂ ಕೋರ್ಟ್ ತೀರ್ಪು ಕೂಡ ೬೦ ವರ್ಷ ವಯಸ್ಸು ಮೀರಿದ ಆನೆಗಳ ಮೇಲೆ ಒತ್ತಡ ಹಾಕದಂತೆ ಸೂಚಿಸಿದೆ. ಇದರಿಂದಾಗಿ ಅಭಿಮನ್ಯು ಆನೆಯನ್ನು ದಸರಾ ಉತ್ಸವದಿಂದ ಕೈಬಿಡಲಾಗಿದೆ. ಹಾಗಾಗಿ ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊರಲಿರುವ ಆನೆ ಯಾವುದು ಎಂಬ ಕುತೂಹಲ ಜನರಲ್ಲಿ ಗರಿಗೆದರಿದೆ. ಇದೇ ತಿಂಗಳ ೨೬ರಂದು ದಸರಾ ಗಜಪಡೆ ಮೈಸೂರಿಗೆ ಆಗಮಿಸಲಿದೆ ಎನ್ನಲಾಗಿದೆ. ಬಹುಶಃ ಅಷ್ಟರೊಳಗೆ ಅಂಬಾರಿ ಆನೆ ಯಾವುದು ಎಂಬುದು ಇತ್ಯರ್ಥವಾದರೆ ಒಳ್ಳೆಯದು. ಅದರಿಂದ ಅಭಿಮನ್ಯು ನಿರ್ಗಮನದಿಂದ ಉಂಟಾಗಿರುವ ಬೇಸರ ಮರೆಯಾಗಬಹುದು. ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕು.
-ಜಿ.ಎಸ್.ಪ್ರಸಾದ್, ಗೋಕುಲಂ, ಮೈಸೂರು
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…