ಡಿಸೆಂಬರ್ 5 ರಾತ್ರಿ 8.30ರ ವೇಳೆ ನಾನು ಮೈಸೂರಿನಿಂದ ನಂಜನಗೂಡಿಗೆ ಹೋಗುತ್ತಿದ್ದೆ. ನನ್ನ ಕಾರಿನಲ್ಲಿ ಫಾಸ್ಟ್ಯಾಗ್ ಇದ್ದರೂ ಟೋಲ್ ಸಿಬ್ಬಂದಿ ಸಾಫ್ಟ್ವೇರ್ ಅಪ್ಡೇಟ್ ಆಗುತ್ತಿದೆ ಎಂದು ಹೇಳಿ ನನ್ನ ಬಳಿ 30 ರೂ. ಟೋಲ್ ಶುಲ್ಕ ವಸೂಲಿ ಮಾಡಿ ರಶೀದಿ ನೀಡಿದರು.
ನಾನು ಇರಬಹುದೇನೊ ಎಂದು ಭಾವಿಸಿ ಸುಮ್ಮನಾದೆ. ಕೆಲ ಸಮಯದ ಬಳಿಕ ನನ್ನ ಫಾಸ್ಟ್ಯಾಗ್ ಖಾತೆಯಿಂದ ೬೦ ರೂ. ಕಡಿತಗೊಂಡಿರುವ ಬಗ್ಗೆ ನನಗೊಂದು ಸಂದೇಶ ಬಂತು. ಅಲ್ಲಿಗೆ ನನ್ನ ಖಾತೆಯ ಹಣ ಮತ್ತು ನಾನು ಟೋಲ್ನಲ್ಲಿ ನೀಡಿದ ಹಣ ಸೇರಿ ಮೈಸೂರಿನಿಂದ ನಂಜನಗೂಡಿಗೆ ೯೦ ರೂ. ಟೋಲ್ ದರ ಪಾವತಿಸಿದಂತಾಯಿತು. ನಂಜನಗೂಡಿನಲ್ಲಿ ಕೆಲಸ ಮುಗಿಸಿ ವಾಪಸ್ ಮೈಸೂರಿಗೆ ಬರುವ ವೇಳೆ ನಾನು ಟೋಲ್ ಸಿಬ್ಬಂದಿಗೆ ಈ ರೀತಿಯಾಗಿ ಹಣ ಕಡಿತಗೊಂಡಿದೆ ಎಂದು ವಿವರಿಸಿದರೆ ಅಲ್ಲಿನ ಸಿಬ್ಬಂದಿ ಇದು ಸಾಫ್ಟ್ ವೇರ್ ಸಮಸ್ಯೆ ಎಂದು ಬೇಜವಾಬ್ದಾರಿಯಿಂದ ಉತ್ತರಿಸಿದರು. ಸಾಲದ್ದಕ್ಕೆ ಅಲ್ಲಿನ ಸಿಬ್ಬಂದಿಗೆ ಕನ್ನಡ ಬರುವುದಿಲ್ಲ.
ಇದು ನನ್ನೊಬ್ಬನ ಸಮಸ್ಯೆ ಮಾತ್ರವಲ್ಲ. ಸಾಕಷ್ಟು ಜನರಿಗೆ ಇದೇ ಸಮಸ್ಯೆ ಎದುರಾಗಿದ್ದು, ಹೆಚ್ಚಿಗೆ ಹಣ ಪಾವತಿಸಿರುವ ಉದಾಹರಣೆಗಳಿವೆ. ಈ ರೀತಿ ಹಣಕ್ಕೆ ಕತ್ತರಿ ಹಾಕುವ ಟೋಲ್ಗಳ ವಿರುದ್ಧ ಸರ್ಕಾರ ಕ್ರಮಕೈಗೊಳ್ಳಬೇಕು.
-ಎನ್. ಹರೀಶ, ಟಿ. ಕೆ. ಬಡಾವಣೆ, ಮೈಸೂರು
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…