ಡಿಸೆಂಬರ್ 5 ರಾತ್ರಿ 8.30ರ ವೇಳೆ ನಾನು ಮೈಸೂರಿನಿಂದ ನಂಜನಗೂಡಿಗೆ ಹೋಗುತ್ತಿದ್ದೆ. ನನ್ನ ಕಾರಿನಲ್ಲಿ ಫಾಸ್ಟ್ಯಾಗ್ ಇದ್ದರೂ ಟೋಲ್ ಸಿಬ್ಬಂದಿ ಸಾಫ್ಟ್ವೇರ್ ಅಪ್ಡೇಟ್ ಆಗುತ್ತಿದೆ ಎಂದು ಹೇಳಿ ನನ್ನ ಬಳಿ 30 ರೂ. ಟೋಲ್ ಶುಲ್ಕ ವಸೂಲಿ ಮಾಡಿ ರಶೀದಿ ನೀಡಿದರು.
ನಾನು ಇರಬಹುದೇನೊ ಎಂದು ಭಾವಿಸಿ ಸುಮ್ಮನಾದೆ. ಕೆಲ ಸಮಯದ ಬಳಿಕ ನನ್ನ ಫಾಸ್ಟ್ಯಾಗ್ ಖಾತೆಯಿಂದ ೬೦ ರೂ. ಕಡಿತಗೊಂಡಿರುವ ಬಗ್ಗೆ ನನಗೊಂದು ಸಂದೇಶ ಬಂತು. ಅಲ್ಲಿಗೆ ನನ್ನ ಖಾತೆಯ ಹಣ ಮತ್ತು ನಾನು ಟೋಲ್ನಲ್ಲಿ ನೀಡಿದ ಹಣ ಸೇರಿ ಮೈಸೂರಿನಿಂದ ನಂಜನಗೂಡಿಗೆ ೯೦ ರೂ. ಟೋಲ್ ದರ ಪಾವತಿಸಿದಂತಾಯಿತು. ನಂಜನಗೂಡಿನಲ್ಲಿ ಕೆಲಸ ಮುಗಿಸಿ ವಾಪಸ್ ಮೈಸೂರಿಗೆ ಬರುವ ವೇಳೆ ನಾನು ಟೋಲ್ ಸಿಬ್ಬಂದಿಗೆ ಈ ರೀತಿಯಾಗಿ ಹಣ ಕಡಿತಗೊಂಡಿದೆ ಎಂದು ವಿವರಿಸಿದರೆ ಅಲ್ಲಿನ ಸಿಬ್ಬಂದಿ ಇದು ಸಾಫ್ಟ್ ವೇರ್ ಸಮಸ್ಯೆ ಎಂದು ಬೇಜವಾಬ್ದಾರಿಯಿಂದ ಉತ್ತರಿಸಿದರು. ಸಾಲದ್ದಕ್ಕೆ ಅಲ್ಲಿನ ಸಿಬ್ಬಂದಿಗೆ ಕನ್ನಡ ಬರುವುದಿಲ್ಲ.
ಇದು ನನ್ನೊಬ್ಬನ ಸಮಸ್ಯೆ ಮಾತ್ರವಲ್ಲ. ಸಾಕಷ್ಟು ಜನರಿಗೆ ಇದೇ ಸಮಸ್ಯೆ ಎದುರಾಗಿದ್ದು, ಹೆಚ್ಚಿಗೆ ಹಣ ಪಾವತಿಸಿರುವ ಉದಾಹರಣೆಗಳಿವೆ. ಈ ರೀತಿ ಹಣಕ್ಕೆ ಕತ್ತರಿ ಹಾಕುವ ಟೋಲ್ಗಳ ವಿರುದ್ಧ ಸರ್ಕಾರ ಕ್ರಮಕೈಗೊಳ್ಳಬೇಕು.
-ಎನ್. ಹರೀಶ, ಟಿ. ಕೆ. ಬಡಾವಣೆ, ಮೈಸೂರು
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…