ಡಿಸೆಂಬರ್ 5 ರಾತ್ರಿ 8.30ರ ವೇಳೆ ನಾನು ಮೈಸೂರಿನಿಂದ ನಂಜನಗೂಡಿಗೆ ಹೋಗುತ್ತಿದ್ದೆ. ನನ್ನ ಕಾರಿನಲ್ಲಿ ಫಾಸ್ಟ್ಯಾಗ್ ಇದ್ದರೂ ಟೋಲ್ ಸಿಬ್ಬಂದಿ ಸಾಫ್ಟ್ವೇರ್ ಅಪ್ಡೇಟ್ ಆಗುತ್ತಿದೆ ಎಂದು ಹೇಳಿ ನನ್ನ ಬಳಿ 30 ರೂ. ಟೋಲ್ ಶುಲ್ಕ ವಸೂಲಿ ಮಾಡಿ ರಶೀದಿ ನೀಡಿದರು.
ನಾನು ಇರಬಹುದೇನೊ ಎಂದು ಭಾವಿಸಿ ಸುಮ್ಮನಾದೆ. ಕೆಲ ಸಮಯದ ಬಳಿಕ ನನ್ನ ಫಾಸ್ಟ್ಯಾಗ್ ಖಾತೆಯಿಂದ ೬೦ ರೂ. ಕಡಿತಗೊಂಡಿರುವ ಬಗ್ಗೆ ನನಗೊಂದು ಸಂದೇಶ ಬಂತು. ಅಲ್ಲಿಗೆ ನನ್ನ ಖಾತೆಯ ಹಣ ಮತ್ತು ನಾನು ಟೋಲ್ನಲ್ಲಿ ನೀಡಿದ ಹಣ ಸೇರಿ ಮೈಸೂರಿನಿಂದ ನಂಜನಗೂಡಿಗೆ ೯೦ ರೂ. ಟೋಲ್ ದರ ಪಾವತಿಸಿದಂತಾಯಿತು. ನಂಜನಗೂಡಿನಲ್ಲಿ ಕೆಲಸ ಮುಗಿಸಿ ವಾಪಸ್ ಮೈಸೂರಿಗೆ ಬರುವ ವೇಳೆ ನಾನು ಟೋಲ್ ಸಿಬ್ಬಂದಿಗೆ ಈ ರೀತಿಯಾಗಿ ಹಣ ಕಡಿತಗೊಂಡಿದೆ ಎಂದು ವಿವರಿಸಿದರೆ ಅಲ್ಲಿನ ಸಿಬ್ಬಂದಿ ಇದು ಸಾಫ್ಟ್ ವೇರ್ ಸಮಸ್ಯೆ ಎಂದು ಬೇಜವಾಬ್ದಾರಿಯಿಂದ ಉತ್ತರಿಸಿದರು. ಸಾಲದ್ದಕ್ಕೆ ಅಲ್ಲಿನ ಸಿಬ್ಬಂದಿಗೆ ಕನ್ನಡ ಬರುವುದಿಲ್ಲ.
ಇದು ನನ್ನೊಬ್ಬನ ಸಮಸ್ಯೆ ಮಾತ್ರವಲ್ಲ. ಸಾಕಷ್ಟು ಜನರಿಗೆ ಇದೇ ಸಮಸ್ಯೆ ಎದುರಾಗಿದ್ದು, ಹೆಚ್ಚಿಗೆ ಹಣ ಪಾವತಿಸಿರುವ ಉದಾಹರಣೆಗಳಿವೆ. ಈ ರೀತಿ ಹಣಕ್ಕೆ ಕತ್ತರಿ ಹಾಕುವ ಟೋಲ್ಗಳ ವಿರುದ್ಧ ಸರ್ಕಾರ ಕ್ರಮಕೈಗೊಳ್ಳಬೇಕು.
-ಎನ್. ಹರೀಶ, ಟಿ. ಕೆ. ಬಡಾವಣೆ, ಮೈಸೂರು
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…