ಬಿಡದಿ ಟೌನ್ಶಿಪ್ ನಿರ್ಮಾಣವನ್ನು ಮಾಡೇ ತೀರುತ್ತೇವೆ ಎನ್ನುವಂತಹ ಹಠಕ್ಕೆ ಬಿದ್ದಂತೆ ರಾಜ್ಯ ಸರ್ಕಾರ ವರ್ತಿಸುತ್ತಿದೆ. ಆದರೆ ಈಗಾಗಲೇ ವಿರೋಧ ಪಕ್ಷಗಳಲ್ಲದೆ ಸಮಾಜದ ಹಲವಾರು ಹಿರಿಯ ಗಣ್ಯರು ಹಾಗೂ ಯಾವುದೇ ರಾಜಕೀಯ ಪಕ್ಷದ ಹಂಗು ಇಲ್ಲದ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸೇರಿದಂತೆ ಹಲವರು ಟೌನ್ಶಿಪ್ಗಾಗಿ ರೈತರ ಜಮೀನನ್ನು ಬಲವಂತವಾಗಿ ಕಿತ್ತು ಕೊಳ್ಳಬಾರದು ಎಂದು ರೈತರ ಜೊತೆ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಇಷ್ಟಾದರೂ ಸರ್ಕಾರ ಯಾವುದಕ್ಕೂ ಮಣಿದಂತೆ ಕಾಣುತ್ತಿಲ್ಲ.
ಸರ್ಕಾರದ ನಡೆ ಪ್ರಜಪ್ರಭುತ್ವಕ್ಕೆ ವಿರೋಧಿಯಾದದ್ದು. ಶೇಕಡಾ ೮೦ ರಷ್ಟು ರೈತರು ತಮ್ಮ ಕೃಷಿ ಜಮೀನು ನೀಡುವುದಿಲ್ಲ ಎಂದು ಕಳೆದ ೬೦ ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ನಡೆದುಕೊಳ್ಳುತ್ತಿರುವ ಉದ್ಧಟತನ ಪರಮಾವಧಿ ,ರೈತರ ಬದುಕಿನ ಮೇಲೆ ನಡೆಸುತ್ತಿರುವ ದಬ್ಬಾಳಿಕೆಯಾಗಿದೆ. ರೈತರ ವಿರೋಧ ಕಟ್ಟಿಕೊಂಡು ಯಾವ ಸರ್ಕಾರವೂ ಮತ್ತೆ ಅಧಿಕಾರಕ್ಕೆ ಬಂದ ಉದಾಹರಣೆ ದೇಶದ ಇಲ್ಲ. ರಾಜ್ಯ ಸರ್ಕಾರ ರೈತರನ್ನು ಗೌರವಿಸುವುದೇ ಆದರೆ ಬಿಡದಿ ಟೌನ್ಶಿಪ್ ಯೋಜನೆಯನ್ನು ಕೈಬಿಡುವುದು ಒಳ್ಳೆಯದು.
-ಬೂಕನಕೆರೆ ವಿಜೇಂದ್ರ, ಮೈಸೂರು
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ…
ಫುಟ್ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟಿನ ಆದೇಶವು ಕಾರಣವಾಗಿದೆ, ನಿಜ. ಆದರೆ ತೆರವಿಗೆ ಮುನ್ನ ಇಂತಹ ವ್ಯಾಪಾರಿಗಳಿಗೆ ಬದಲಿ ಶಾಶ್ವತ…
ವಿಶ್ವವಿಖ್ಯಾತ ಮೈಸೂರಿನ ದಸರಾದಲ್ಲಿ ಕಳೆದ ಬಾರಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಸಾವಿರಾರು ರೂಪಾಯಿಗಳ ದರ ನಿಗದಿಪಡಿಸಿ ಗೋಲ್ಡನ್ ಪಾಸ್ಗಳನ್ನು ವಿತರಣೆ…
ವೈದ್ಯಕೀಯ ಶಿಕ್ಷಣ ಎಂಬಿಬಿಎಸ್ ಮತ್ತು ಅದರ ಸಂಬಂಧಿತ ಬಿಡಿಎಸ್, ಬಿಎಎಂಎಸ್ ಹಾಗೂ ಬಿಎಚ್ಎಂಎಸ್ ಪದವಿ ಶಿಕ್ಷಣದ ಪ್ರವೇಶಕ್ಕೆ ಅರ್ಹತೆಯನ್ನು ಪರೀಕ್ಷಿಸುವ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಪಶ್ಚಿಮ ಘಟ್ಟದ ಸಕಲೇಶಪುರ ರೈಲು ಮಾರ್ಗದಲ್ಲಿ ಶೀಘ್ರವೇ ವಂದೇ ಭಾರತ್ ಪ್ರಯಾಣಿಕರ ರೈಲು ಸಂಚಾರ ಆರಂಭಿಸಲು…
ಕುಸುಮ ಆಯರಹಳ್ಳಿ ಈ ಊರ ಹಳೇ ಹೆಸರೇನೇಳಿ? ಮಹಿಷ ಮಂಡಲ, ಮಯಿಸನಾಡು, ಮೈಸಾಪುರ... ಆ ಮೈಸಾಪುರವೇ ನಂತರ ಮೈಸೂರು ಆಯ್ತು…