ಓದುಗರ ಪತ್ರ
ಮೈಸೂರಿನ ಕುಕ್ಕರಹಳ್ಳಿ ಕೆರೆ ಬಳಿ ಮೈಸೂರು ವಿಶ್ವವಿದ್ಯಾನಿಲಯದ ಹಿಂಭಾಗ ಮೈಸೂರು – ಚಾಮರಾಜನಗರ ರೈಲ್ವೆ ಹಳಿಯ ಪಕ್ಕದಲ್ಲಿದ್ದ ೩೫ ಮರಗಳನ್ನು ಕಡಿದು ಉರುಳಿಸುವುದು ನಾಚಿಕೆಗೇಡಿನ ಸಂಗತಿ. ಮಳೆ – ಗಾಳಿಯ ಸಂದರ್ಭದಲ್ಲಿ ವಿದ್ಯುತ್ ತಂತಿಯ ಮೇಲೆ ಮರದ ಕೊಂಬೆಗಳುಬೀಳುವ ಸಾಧ್ಯತೆ ಇರುವುದರಿಂದ ಆ ಮರಗಳನ್ನು ತೆರವು ಮಾಡಿರುವುದಾಗಿ ಅಧಿಕಾರಿಗಳು ಹೇಳುತ್ತಾರೆ. ಆದರೆ ವಾಸ್ತವ ಸ್ಥಿತಿ ಏನೆಂದರೆ ವಿದ್ಯುತ್ ತಂತಿಗೆ ತಗಲುವ ಮರದ ಕೊಂಬೆಗಳನ್ನು ಕಡಿದಿದ್ದರೆ ಸಾಕಾಗಿತ್ತು, ಹಲವಾರು ವರ್ಷಗಳಿಂದ ಬೆಳೆದಿದ್ದ ೩೫ ಮರಗಳನ್ನು ಸಂಪೂರ್ಣವಾಗಿ ಕಡಿದಿರುವುದು ಯಾವ ನ್ಯಾಯ? ಇತ್ತೀಚೆಗೆ ಮೈಸೂರಿನಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ಬೆಳೆದು ನಿಂತಿರುವ ಮರಗಳ ಮೇಲೆ ವಕ್ರದೃಷ್ಟಿ ಬಿದ್ದಿರುವುದಂತೂ ನಿಜ.
ಇನ್ನು ಮುಂದಾದರೂ ಅಭಿವೃದ್ಧಿಯ ನೆಪದಲ್ಲಿ ನೂರಾರು ವರ್ಷಗಳಿಂದ ಬೆಳೆದು ನಿಂತಿರುವ ಮರಗಳನ್ನು ಧರೆಗೆ ಉರುಳಿಸದೆ ಅಧಿಕಾರಿಗಳು, ಜನಪ್ರತಿನಿಧಿಗಳು,ಪರಿಸರ ಪ್ರೇಮಿಗಳು ಒಟ್ಟಾಗಿ ಕುಳಿತು ಮಾತನಾಡಿ ಒಮ್ಮತದ ತೀರ್ಮಾನಕ್ಕೆ ಬಂದು ಮುಂದುವರಿಯುವುದು ಒಳ್ಳೆಯದು.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…