ಓದುಗರ ಪತ್ರ
ಮೈಸೂರಿನ ಕುಕ್ಕರಹಳ್ಳಿ ಕೆರೆ ಬಳಿ ಮೈಸೂರು ವಿಶ್ವವಿದ್ಯಾನಿಲಯದ ಹಿಂಭಾಗ ಮೈಸೂರು – ಚಾಮರಾಜನಗರ ರೈಲ್ವೆ ಹಳಿಯ ಪಕ್ಕದಲ್ಲಿದ್ದ ೩೫ ಮರಗಳನ್ನು ಕಡಿದು ಉರುಳಿಸುವುದು ನಾಚಿಕೆಗೇಡಿನ ಸಂಗತಿ. ಮಳೆ – ಗಾಳಿಯ ಸಂದರ್ಭದಲ್ಲಿ ವಿದ್ಯುತ್ ತಂತಿಯ ಮೇಲೆ ಮರದ ಕೊಂಬೆಗಳುಬೀಳುವ ಸಾಧ್ಯತೆ ಇರುವುದರಿಂದ ಆ ಮರಗಳನ್ನು ತೆರವು ಮಾಡಿರುವುದಾಗಿ ಅಧಿಕಾರಿಗಳು ಹೇಳುತ್ತಾರೆ. ಆದರೆ ವಾಸ್ತವ ಸ್ಥಿತಿ ಏನೆಂದರೆ ವಿದ್ಯುತ್ ತಂತಿಗೆ ತಗಲುವ ಮರದ ಕೊಂಬೆಗಳನ್ನು ಕಡಿದಿದ್ದರೆ ಸಾಕಾಗಿತ್ತು, ಹಲವಾರು ವರ್ಷಗಳಿಂದ ಬೆಳೆದಿದ್ದ ೩೫ ಮರಗಳನ್ನು ಸಂಪೂರ್ಣವಾಗಿ ಕಡಿದಿರುವುದು ಯಾವ ನ್ಯಾಯ? ಇತ್ತೀಚೆಗೆ ಮೈಸೂರಿನಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ಬೆಳೆದು ನಿಂತಿರುವ ಮರಗಳ ಮೇಲೆ ವಕ್ರದೃಷ್ಟಿ ಬಿದ್ದಿರುವುದಂತೂ ನಿಜ.
ಇನ್ನು ಮುಂದಾದರೂ ಅಭಿವೃದ್ಧಿಯ ನೆಪದಲ್ಲಿ ನೂರಾರು ವರ್ಷಗಳಿಂದ ಬೆಳೆದು ನಿಂತಿರುವ ಮರಗಳನ್ನು ಧರೆಗೆ ಉರುಳಿಸದೆ ಅಧಿಕಾರಿಗಳು, ಜನಪ್ರತಿನಿಧಿಗಳು,ಪರಿಸರ ಪ್ರೇಮಿಗಳು ಒಟ್ಟಾಗಿ ಕುಳಿತು ಮಾತನಾಡಿ ಒಮ್ಮತದ ತೀರ್ಮಾನಕ್ಕೆ ಬಂದು ಮುಂದುವರಿಯುವುದು ಒಳ್ಳೆಯದು.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…