Andolana originals

ಓದುಗರ ಪತ್ರ: ಜಾತಿ ಗಣತಿ ವರದಿಗೆ ಅವಸರವೇಕೆ?

1990ರಲ್ಲಿ ಎಪಿ.ಸಿಂಗ್ ಅವರು ತಮಗೆ ರಾಜಕೀಯ ಸಂಕಷ್ಟ ಎದುರಾದಾಗ ದಿಢೀರ್ ಎಂದು ಮಂಡಲ್ ಕಮಿಷನ್ ವರದಿಯನ್ನು ಜಾರಿಗೊಳಿಸಿ ಅದರ ಲಾಭದಿಂದ ರಾಜಕೀಯ ಸಂಕಷ್ಟದಿಂದ ದೂರಾದರು. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ವಿ.ಪಿ.ಸಿಂಗ್‌ರವರ ಮಾರ್ಗವನ್ನೇ ಅನುಸರಿಸುತ್ತಿದ್ದಾರೇನೋ ಅನಿಸುತ್ತದೆ. ಸದ್ಯ ಸಿದ್ದರಾಮಯ್ಯನವರಿಗೆ ಮುಡಾ ಹಗರಣ ತಲೆನೋವಾಗಿ ಪರಿಣಮಿಸಿದೆ. ಈ ಸಂಕಷ್ಟದಿಂದ ಪಾರಾಗಲು ಅವರು ಜಾತಿಗಣತಿ ವರದಿಯನ್ನು ಹೊರತಂದು ಅದರಿಂದ ರಾಜಕೀಯ ಲಾಭ ಪಡೆದುಕೊಳ್ಳಲು ಯತ್ನಿಸುತ್ತಿದ್ದಾರೇನೋ ಎಂಬ ಅನುಮಾನ ಶುರುವಾಗಿದೆ.

ಇಷ್ಟು ದಿನಗಳ ಕಾಲ ಜಾತಿ ಗಣತಿಯ ವರದಿಯನ್ನು ಬಿಡುಗಡೆ ಮಾಡಲು ಮುಂದಾಗದ ಸಿದ್ದರಾಮಯ್ಯನವರು ಈಗ ಅವಸರದಲ್ಲಿ ಸಿದ್ಧತೆ ಮಾಡಿಕೊಳ್ಳುವುದನ್ನು ನೋಡಿದರೆ ಅವರು ಜಾತಿ ಗಣತಿಯ ವರದಿಯನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುವ ತಂತ್ರಗಾರಿಕೆಯನ್ನು ರೂಪಿಸಿದ್ದಾರೇನೋ ಎಂಬ ಸಂದೇಹ ಮೂಡಿಸಿದೆ. ಜಾತಿ ಗಣತಿ ವರದಿ ಬಿಡುಗಡೆಯಾದ ಮೇಲೆ ‘ಮುಡಾ’ ಹಗರಣದ ವಿರುದ್ಧ ನಡೆಯುತ್ತಿರುವ ಹೋರಾಟ ಕ್ರಮೇಣ ಕಡಿಮೆಯಾಗಿ ಜಾತಿ ಹೆಸರಿನಲ್ಲಿ ಹೋರಾಟಗಳು ಆರಂಭಗೊಂಡರೂ ಆಶ್ಚರ್ಯವಿಲ್ಲ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

52 mins ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

54 mins ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

56 mins ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

58 mins ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

1 hour ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

1 hour ago