ಓದುಗರ ಪತ್ರ
1990ರಲ್ಲಿ ಎಪಿ.ಸಿಂಗ್ ಅವರು ತಮಗೆ ರಾಜಕೀಯ ಸಂಕಷ್ಟ ಎದುರಾದಾಗ ದಿಢೀರ್ ಎಂದು ಮಂಡಲ್ ಕಮಿಷನ್ ವರದಿಯನ್ನು ಜಾರಿಗೊಳಿಸಿ ಅದರ ಲಾಭದಿಂದ ರಾಜಕೀಯ ಸಂಕಷ್ಟದಿಂದ ದೂರಾದರು. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ವಿ.ಪಿ.ಸಿಂಗ್ರವರ ಮಾರ್ಗವನ್ನೇ ಅನುಸರಿಸುತ್ತಿದ್ದಾರೇನೋ ಅನಿಸುತ್ತದೆ. ಸದ್ಯ ಸಿದ್ದರಾಮಯ್ಯನವರಿಗೆ ಮುಡಾ ಹಗರಣ ತಲೆನೋವಾಗಿ ಪರಿಣಮಿಸಿದೆ. ಈ ಸಂಕಷ್ಟದಿಂದ ಪಾರಾಗಲು ಅವರು ಜಾತಿಗಣತಿ ವರದಿಯನ್ನು ಹೊರತಂದು ಅದರಿಂದ ರಾಜಕೀಯ ಲಾಭ ಪಡೆದುಕೊಳ್ಳಲು ಯತ್ನಿಸುತ್ತಿದ್ದಾರೇನೋ ಎಂಬ ಅನುಮಾನ ಶುರುವಾಗಿದೆ.
ಇಷ್ಟು ದಿನಗಳ ಕಾಲ ಜಾತಿ ಗಣತಿಯ ವರದಿಯನ್ನು ಬಿಡುಗಡೆ ಮಾಡಲು ಮುಂದಾಗದ ಸಿದ್ದರಾಮಯ್ಯನವರು ಈಗ ಅವಸರದಲ್ಲಿ ಸಿದ್ಧತೆ ಮಾಡಿಕೊಳ್ಳುವುದನ್ನು ನೋಡಿದರೆ ಅವರು ಜಾತಿ ಗಣತಿಯ ವರದಿಯನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುವ ತಂತ್ರಗಾರಿಕೆಯನ್ನು ರೂಪಿಸಿದ್ದಾರೇನೋ ಎಂಬ ಸಂದೇಹ ಮೂಡಿಸಿದೆ. ಜಾತಿ ಗಣತಿ ವರದಿ ಬಿಡುಗಡೆಯಾದ ಮೇಲೆ ‘ಮುಡಾ’ ಹಗರಣದ ವಿರುದ್ಧ ನಡೆಯುತ್ತಿರುವ ಹೋರಾಟ ಕ್ರಮೇಣ ಕಡಿಮೆಯಾಗಿ ಜಾತಿ ಹೆಸರಿನಲ್ಲಿ ಹೋರಾಟಗಳು ಆರಂಭಗೊಂಡರೂ ಆಶ್ಚರ್ಯವಿಲ್ಲ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಶ್ರೇಯಸ್ ದೇವನೂರು ಭಾರತದ ಅರಣ್ಯಗಳು ಕೇವಲ ಮರಗಳ ಗುಂಪಲ್ಲ; ಅವು ಜೀವವೈವಿಧ್ಯದ ಅದ್ಭುತ ಭಂಡಾರ. ಅಲ್ಲಿ ಪ್ರತಿಯೊಂದು ಕ್ಷಣವೂ ಅನಿರೀಕ್ಷಿತ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ವಲಯದ ಕೆಲವೆಡೆ ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ಕೆಲವು ಸಿಬ್ಬಂದಿ ಗಾಯಗೊಂಡಿದ್ದರು.…
ರೈತರು, ಕಾಡುಪ್ರಾಣಿಗಳಿಗೆ ನೀರಿನ ತೊಂದರೆ ; ಶೀಘ್ರದಲ್ಲಿ ಹೂಳು ತೆಗೆಸಲು ಆಗ್ರಹ ಹನೂರು : ಉಡುತೊರೆ ಹಳ್ಳ ಜಲಾಶಯ ನಿರ್ಮಾಣವಾದ…
ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…