ಓದುಗರ ಪತ್ರ
ಮುಂದೆ ಬರಲಿರುವ ನಗರಪಾಲಿಕೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರದ ಬದಲಿಗೆ ಓಬಿರಾಯನ ಕಾಲದ ಬ್ಯಾಲೆಟ್ ಪೇಪರ್ ಅನ್ನು ಬಳಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಈವರೆಗೆ ಇವಿಎಂ ಮುಖಾಂತರ ನಡೆದಿರುವ ಚುನಾವಣೆಗಳ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ನಂಬಿಕೆ ಇಲ್ಲವೇ? ಇವಿಎಂ ಬಳಸುವುದರಿಂದ, ಸಮಯ,ಹಣ, ಮಾನವ ಶಕ್ತಿ, ಕಾಗದ ಎಲ್ಲವೂ ಉಳಿತಾಯವಾಗುವುದಿಲ್ಲವೇ? ಚುನಾವಣೆ ಫಲಿತಾಂಶ ಕೆಲವೇ ಗಂಟೆಗಳಲ್ಲಿ ದೊರಕುತ್ತಿಲ್ಲವೇ? ಇಷ್ಟೆಲ್ಲಾ ಪ್ರಯೋಜನಗಳಿದ್ದರೂ ಕಾಂಗ್ರೆಸ್ ಪಕ್ಷ ಇವಿಎಂ ವಿರೋಧಿಸುವುದರ ಹಿಂದಿನ ಹುನ್ನಾರಗಳೇನು? ಬ್ಯಾಲೆಟ್ ಪೇಪರ್ ತಯಾರಿಕೆಗಾಗಿ ಮರಗಳನ್ನು ಕಡಿದು ಸರ್ವನಾಶ ಮಾಡಬೇಕೇ? ಇಂತಹ ಸಂಗತಿಗಳೆಲ್ಲವೂ ತಿಳಿದಿದ್ದರೂ ಇವಿಎಂ ಬೇಡ ಎನ್ನುತ್ತಿರುವುದೇಕೆ?ಇಡೀ ವಿಶ್ವವೇ, ತಂತ್ರಜ್ಞಾನ ಬಳಸಿ ಚುನಾವಣೆ ನಡೆಸುತ್ತಿರುವಾಗ,ಕರ್ನಾಟಕ ಸರ್ಕಾರ ಮಾತ್ರ ಓಬಿರಾಯನ ಕಾಲದ ಬ್ಯಾಲೆಟ್ ಪೇಪರ್ ಬಳಸಲು ಮುಂದಾಗಿರುವುದು ಹಾಸ್ಯಾಸ್ಪದವಾಗಿ ಕಾಣುತ್ತದೆ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…
ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…