ಓದುಗರ ಪತ್ರ
ಮುಂದೆ ಬರಲಿರುವ ನಗರಪಾಲಿಕೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರದ ಬದಲಿಗೆ ಓಬಿರಾಯನ ಕಾಲದ ಬ್ಯಾಲೆಟ್ ಪೇಪರ್ ಅನ್ನು ಬಳಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಈವರೆಗೆ ಇವಿಎಂ ಮುಖಾಂತರ ನಡೆದಿರುವ ಚುನಾವಣೆಗಳ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ನಂಬಿಕೆ ಇಲ್ಲವೇ? ಇವಿಎಂ ಬಳಸುವುದರಿಂದ, ಸಮಯ,ಹಣ, ಮಾನವ ಶಕ್ತಿ, ಕಾಗದ ಎಲ್ಲವೂ ಉಳಿತಾಯವಾಗುವುದಿಲ್ಲವೇ? ಚುನಾವಣೆ ಫಲಿತಾಂಶ ಕೆಲವೇ ಗಂಟೆಗಳಲ್ಲಿ ದೊರಕುತ್ತಿಲ್ಲವೇ? ಇಷ್ಟೆಲ್ಲಾ ಪ್ರಯೋಜನಗಳಿದ್ದರೂ ಕಾಂಗ್ರೆಸ್ ಪಕ್ಷ ಇವಿಎಂ ವಿರೋಧಿಸುವುದರ ಹಿಂದಿನ ಹುನ್ನಾರಗಳೇನು? ಬ್ಯಾಲೆಟ್ ಪೇಪರ್ ತಯಾರಿಕೆಗಾಗಿ ಮರಗಳನ್ನು ಕಡಿದು ಸರ್ವನಾಶ ಮಾಡಬೇಕೇ? ಇಂತಹ ಸಂಗತಿಗಳೆಲ್ಲವೂ ತಿಳಿದಿದ್ದರೂ ಇವಿಎಂ ಬೇಡ ಎನ್ನುತ್ತಿರುವುದೇಕೆ?ಇಡೀ ವಿಶ್ವವೇ, ತಂತ್ರಜ್ಞಾನ ಬಳಸಿ ಚುನಾವಣೆ ನಡೆಸುತ್ತಿರುವಾಗ,ಕರ್ನಾಟಕ ಸರ್ಕಾರ ಮಾತ್ರ ಓಬಿರಾಯನ ಕಾಲದ ಬ್ಯಾಲೆಟ್ ಪೇಪರ್ ಬಳಸಲು ಮುಂದಾಗಿರುವುದು ಹಾಸ್ಯಾಸ್ಪದವಾಗಿ ಕಾಣುತ್ತದೆ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…