Andolana originals

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ ಬಂದಾಗ ಮಾತ್ರ ದೇಶದ ನಿಜವಾದ ಪ್ರಗತಿ ಸಾಧ್ಯ ಎಂದು ಡಾ.ಅಂಬೇಡ್ಕರ್ ಹೇಳಿದ್ದಾರೆ. ರಾಜ್ಯ ಸರ್ಕಾರವು ಪರಿಶಿಷ್ಟ ಜತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಐಎಎಸ್, ಕೆಎಎಸ್, ಬ್ಯಾಂಕಿಂಗ್, ರೈಲ್ವೆ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುವ ಕಾರ್ಯಕ್ರಮ ರೂಪಿಸಿದೆ ಅಷ್ಟೇ.

ಆದರೆ, ಕಳೆದ ೨-೩ ವರ್ಷಗಳಿಂದ ಈ ತರಬೇತಿಗೆ ಅರ್ಜಿಯನ್ನೇ ಆಹ್ವಾನಿಸಿಲ್ಲ. ಈಗಾಗಲೇ, ೨೦೨೫-೨೦೨೬ನೇ ಸಾಲು ಮುಗಿದು ಹೋಗಿದೆ. ಇನ್ನೂ ಯುಪಿಎಸ್‌ಸಿ ಪರೀಕ್ಷೆಗೂ ನೀಡುವಂತಹ ತರಬೇತಿಗೆ ಅರ್ಜಿ ಕರೆದಿಲ್ಲ. ಇದಕ್ಕೆ ನೈಜ ಕಾರಣವಾದರೂ ಏನು..? ಗಮನಿಸಬೇಕಾದ ಅಂಶವೆಂದರೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಣ್ಣ ಹುದ್ದೆಯಿಂದ ಹಿಡಿದು ಉನ್ನತ ಅಧಿಕಾರಿಗಳವರೆಗೂ ಬಹುತೇಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಧಿಕಾರಿಗಳೇ ಇದ್ದಾರೆ.

ನಿರ್ಧಾರ ತೆಗೆದುಕೊಳ್ಳುವ ಹಂತದಲ್ಲೂ ಹಾಗೂ ಕಾನೂನು ಕಟ್ಟಪ್ಪಣೆಗಳನ್ನು ಹೊರಡಿಸುವ ಸಮಾಜ ಕಲ್ಯಾಣ ಇಲಾಖೆಯ ಮಂತ್ರಿಗಳೂ ಬಹುತೇಕ ಪರಿಶಿಷ್ಟ ಜತಿಯವರೇ ಇರುತ್ತಾರೆ. ಹೀಗಿದ್ದರು ಈ ಪರಿ ನಿರ್ಲಕ್ಷ್ಯ ಆದರೂ ಏಕೆ..? ಸರ್ಕಾರದಿಂದ ಸಿಗುವಂಥ ಯೋಜನೆ ಸಂವಿಧಾನಾತ್ಮಕ ಹಕ್ಕು. ದಯೆ ಅಲ್ಲ. ಸಾಮಾಜಿಕ ನ್ಯಾಯ ಅಂದರೆ ಯಾವುದೇ ಯೋಜನೆಗಳು ನಿರಂತರವಾಗಿ ಸಿಗಬೇಕೇ ವಿನ ನಿಲ್ಲಬಾರದು. ಮುಖ್ಯಮಂತ್ರಿಗಳು ಇತ್ತ ಗಮನಹರಿಸಿ ಸಮಸ್ಯೆ ಪರಿಹರಿಸಲಿ.

– ಅನಿಲ್ ಕುಮಾರ್, ನಂಜನಗೂಡು

ಆಂದೋಲನ ಡೆಸ್ಕ್

Recent Posts

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

3 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

3 hours ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

13 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

17 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

18 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

19 hours ago