Andolana originals

ಓದುಗರ ಪತ್ರ: ಬೆಲೆ ಏರಿಕೆಯ ಬರೆ ಏಕೆ?

ರಾಜ್ಯ ಸರ್ಕಾರ ಸತತವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ವಿದ್ಯುತ್ ದರ ಏರಿಕೆಯ ಬೆನ್ನಲ್ಲೆ ಹಾಲಿನ ದರವನ್ನೂ ಏರಿಕೆ ಮಾಡುವ ಮೂಲಕ ಯುಗಾದಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಶಾಕ್ ನೀಡಿದೆ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸತತವಾಗಿ ಹಾಲಿನ ದರ ಮತ್ತು ವಿದ್ಯುತ್ ದರ ಏರಿಕೆ ಮಾಡುತ್ತಿರುವುದು ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದೆ. ದುಡಿಯುವ ವರ್ಗಕ್ಕೆ ಈ ಬೆಲೆ ಏರಿಕೆ ನೀತಿಯು ಗಾಯದ ಮೇಲೆ ಬರೆ ಎಳೆದಂತಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈವರೆಗೂ ಎರಡು ಬಾರಿ ಹಾಲಿನ ದರವನ್ನು ಏರಿಕೆ ಮಾಡಿದೆ. ಈಗ ಏಪ್ರಿಲ್ ೧ರಿಂದ ಜಾರಿಗೆ ಬರುವಂತೆ ಮತ್ತೊಮ್ಮೆ ೪ ರೂ. ಏರಿಕೆ ಮಾಡುವ ಮೂಲಕ ಗ್ರಾಹಕರ ಕೆಂಗಣ್ಣಿಗೆ ಗುರಿಯಾಗಿದೆ. ಇದರೊಂದಿಗೆ ವಿದ್ಯುತ್ ದರ ಕೂಡ ಏರಿಕೆಯಾಗಿರುವುದು ಗ್ರಾಹಕರಿಗೆ ಹೊರೆಯಾಗಿದೆ. ಬಡವರ ಪರವಾಗಿದ್ದೇವೆ ಎನ್ನುವ ಸರ್ಕಾರ ಹೀಗೆ ಬೆಲೆ ಏರಿಕೆ ಮಾಡುವುದರಿಂದ ಬಡವರಿಗಾಗುವ ಅನುಕೂಲವಾದರೂ ಏನು? ಆದ್ದರಿಂದ ಸರ್ಕಾರ ಈ ಬೆಲೆ ಏರಿಕೆ ನೀತಿಯನ್ನು ಕೈಬಿಡಲಿ.

-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

31 mins ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

32 mins ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

34 mins ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

36 mins ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

40 mins ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

44 mins ago