ಓದುಗರ ಪತ್ರ
ರಾಜ್ಯ ಸರ್ಕಾರ ಸತತವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ವಿದ್ಯುತ್ ದರ ಏರಿಕೆಯ ಬೆನ್ನಲ್ಲೆ ಹಾಲಿನ ದರವನ್ನೂ ಏರಿಕೆ ಮಾಡುವ ಮೂಲಕ ಯುಗಾದಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಶಾಕ್ ನೀಡಿದೆ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸತತವಾಗಿ ಹಾಲಿನ ದರ ಮತ್ತು ವಿದ್ಯುತ್ ದರ ಏರಿಕೆ ಮಾಡುತ್ತಿರುವುದು ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದೆ. ದುಡಿಯುವ ವರ್ಗಕ್ಕೆ ಈ ಬೆಲೆ ಏರಿಕೆ ನೀತಿಯು ಗಾಯದ ಮೇಲೆ ಬರೆ ಎಳೆದಂತಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈವರೆಗೂ ಎರಡು ಬಾರಿ ಹಾಲಿನ ದರವನ್ನು ಏರಿಕೆ ಮಾಡಿದೆ. ಈಗ ಏಪ್ರಿಲ್ ೧ರಿಂದ ಜಾರಿಗೆ ಬರುವಂತೆ ಮತ್ತೊಮ್ಮೆ ೪ ರೂ. ಏರಿಕೆ ಮಾಡುವ ಮೂಲಕ ಗ್ರಾಹಕರ ಕೆಂಗಣ್ಣಿಗೆ ಗುರಿಯಾಗಿದೆ. ಇದರೊಂದಿಗೆ ವಿದ್ಯುತ್ ದರ ಕೂಡ ಏರಿಕೆಯಾಗಿರುವುದು ಗ್ರಾಹಕರಿಗೆ ಹೊರೆಯಾಗಿದೆ. ಬಡವರ ಪರವಾಗಿದ್ದೇವೆ ಎನ್ನುವ ಸರ್ಕಾರ ಹೀಗೆ ಬೆಲೆ ಏರಿಕೆ ಮಾಡುವುದರಿಂದ ಬಡವರಿಗಾಗುವ ಅನುಕೂಲವಾದರೂ ಏನು? ಆದ್ದರಿಂದ ಸರ್ಕಾರ ಈ ಬೆಲೆ ಏರಿಕೆ ನೀತಿಯನ್ನು ಕೈಬಿಡಲಿ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.
ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…
ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…