Andolana originals

ಓದುಗರ ಪತ್ರ: ವಾಲ್ಮೀಕಿಯನ್ನು ಮರೆತದ್ದೇಕೆ?

ರಾಜ್ಯದ 18 ಆಕಾಶವಾಣಿ ಕೇಂದ್ರಗಳ ಪ್ರತಿದಿನ ಬೆಳಿಗ್ಗೆ 6.10ಕ್ಕೆ 5 ನಿಮಿಷಗಳ ಕಾಲ ‘ಚಿಂತನ’ ಎಂಬ ವಿಶೇಷ ಕಾರ್ಯಕ್ರಮವನ್ನು ಪ್ರಸಾದ ಮಾಡುತ್ತಿದ್ದು, ಕೇಳುಗರಿಗೆ ಉಪಯುಕ್ತ ಮಾಹಿತಿ ನೀಡುತ್ತಿವೆ.

ಈ ಕಾರ್ಯಕ್ರಮದಲ್ಲಿ ಅಂದಿನ ದಿನದ ವಿಶೇಷತ, ಹಬ್ಬ ಆದರ್ಶ ವ್ಯಕ್ತಿಗಳ ಜೀವನ ಚರಿತ್ರೆ, ಸಮಾಜಕ್ಕೆ ಕೊಡುಗೆ

ನೀಡಿದವರ ಬಗ್ಗೆ ವಿವಿಧ ಕ್ಷೇತ್ರಗಳ ಸಾಧಕರು ಮಾತನಾಡುತ್ತಾರೆ. ಆದರೆ, ಅ.17ರಂದು ರಾಮಾಯಣ ಮಹಾಕಾವ್ಯದ ಕರ್ತ್ಯ ‘ಮಹರ್ಷಿ ವಾಲ್ಮೀಕಿ ಜಯಂತಿ’ ಇದ್ದರೂ ಅವರ ಬಗ್ಗೆ ಈ ಕಾರ್ಯಕ್ರಮದಲ್ಲಿ ಯಾವುದೇ ಮಾಹಿತಿ ನೀಡದೇ ಹೋಗಿದ್ದು, ಕೇಳುಗರಲ್ಲಿ ಬೇಸರ ಮೂಡಿಸಿದೆ. ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ, ಮಹಾವೀರ ಜಯಂತಿ, ಬಸವ ಜಯಂತಿ, ಗಾಂಧಿ ಜಯಂತಿ, ಕೆಂಪೇಗೌಡರ ಜಯಂತಿ ಹೀಗೆ ಎಲ್ಲ ಜಯಂತಿಗಳಲ್ಲೂ ಅವರ ಬಗ್ಗೆ ಮಾಹಿತಿ ನೀಡುವ ಆಕಾಶವಾಣಿಯವರು ವಾಲ್ಮೀಕಿಯನ್ನು ಮಾತ್ರ ಮರೆತದ್ದು ಏಕೆ? ಇದು ಒಂದು ಸಮುದಾಯಕ್ಕೆ ಮಾಡಿದ ಅವಮಾನವಲ್ಲವೇ? ಆಕಾಶವಾಣಿಯ ನಿರ್ದೇಶಕರು ಮುಂದಿನ ದಿನಗಳಲ್ಲಾದರೂ ಹೀಗಾಗದಂತೆ ಎಚ್ಚರವಹಿಸಿ ಮಹನೀಯರ ಜಯಂತಿಗಳ ಬಗ್ಗೆ ಮಾಹಿತಿ ನೀಡುವಂತಾಗಲಿ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊಲ್ಲಿ ರಾಷ್ಟ್ರಗಳಲ್ಲಿ ಮುಂದುವರಿದ ಆತಂಕ

ಮಧ್ಯ ಪ್ರಾಚ್ಯದಲ್ಲಿ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದಿಂದ ನಡೆಯುತ್ತಿರುವ ದಾಳಿ ಹಾಗೂ ಯುಎಇ, ಬಹರೇನ್, ಕುವೈತ್ ಮೊದಲಾದ ರಾಷ್ಟ್ರಗಳಲ್ಲಿರುವ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸಫುರಾ ಖಾನ್ ಎಂಬ ಆಟೋ ಓಡಿಸುವ ಕನಸುಗಾರ್ತಿ

೩೦ ವರ್ಷ ಪ್ರಾಯದ ಸಫುರಾ ಖಾನ್‌ರ ತಂದೆ ತಾಯಿ ಚೆನ್ನೆ ಯಿಂದ ಕರ್ನಾಟಕಕ್ಕೆ ವಲಸೆ ಬಂದಾಗ ಆಕೆ ಇನ್ನೂ ಮಗುವಾಗಿದ್ದರು.…

3 hours ago

ರಾಷ್ಟ್ರಿಯ ಹೆದ್ದಾರಿ ಅಗಲೀಕರಣ ವಿಳಂಬ: ಆರೋಪ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಗುಂಡ್ಲುಪೇಟೆಯಿಂದ ನಂಜನಗೂಡು ತನಕ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ರಸ್ತೆಯ ಎರಡೂ ಬದಿಗಳನ್ನು ಅಗೆದು…

3 hours ago

ಮೂಗನಕೊಪ್ಪಲಿನಲ್ಲಿ ಮಾದರಿ ಚಾಕಿ ಸಾಕಾಣಿಕಾ ಕೇಂದ್ರ

ಮಾಮರಶಿ ರೇಷ್ಮೆ ಕೃಷಿಯಿಂದಲೇ ಉದ್ಯಮ ಕಟ್ಟಿದ ರೇಷ್ಮೆ ತ್ಯಾಗರಾಜು ೨೦೦ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿದ ರೈತನ ಮಗ ಮಳವಳ್ಳಿ:…

3 hours ago

ಆದಾಯದ ಹಳಿಗೆ ಮರಳಿದ ಮೃಗಾಲಯ

ಕೆ.ಬಿ.ರಮೇಶನಾಯಕ ಮೈಸೂರು: ದಕ್ಷಿಣ ಭಾರತದಲ್ಲೇ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಶ್ರೀ ಚಾಮರಾಜೇಂದ್ರ ಮೃಗಾಲಯವು ಕೋವಿಡ್ ಸಮಯದಲ್ಲಿ ಆದಾಯ ಕುಸಿತದಿಂದ ಕಂಗೆಟ್ಟರೂ…

3 hours ago

ಲೆಬನಾನಿನ ನಾಶಕ್ಕೆ ಕಾರಣವಾಗುತ್ತಿರುವ ಹೆಜ್ಬುಲ್ಲಾ ಎಂಬ ದೇವರ ಪಕ್ಷ!

ಶೇಷಾದ್ರಿ ಗಂಜೂರು ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ನಾಲ್ಕನೇ ದಿನ ಪೂರ್ಣಗೊಳಿಸಿದೆ. ಯುದ್ಧದ ಬೀಸಿಗೆ ಸಿಲುಕಿ ಮುಖ್ಯವಾಗಿ ೧೨…

3 hours ago