ಓದುಗರ ಪತ್ರ
ರಾಜ್ಯದ 18 ಆಕಾಶವಾಣಿ ಕೇಂದ್ರಗಳ ಪ್ರತಿದಿನ ಬೆಳಿಗ್ಗೆ 6.10ಕ್ಕೆ 5 ನಿಮಿಷಗಳ ಕಾಲ ‘ಚಿಂತನ’ ಎಂಬ ವಿಶೇಷ ಕಾರ್ಯಕ್ರಮವನ್ನು ಪ್ರಸಾದ ಮಾಡುತ್ತಿದ್ದು, ಕೇಳುಗರಿಗೆ ಉಪಯುಕ್ತ ಮಾಹಿತಿ ನೀಡುತ್ತಿವೆ.
ಈ ಕಾರ್ಯಕ್ರಮದಲ್ಲಿ ಅಂದಿನ ದಿನದ ವಿಶೇಷತ, ಹಬ್ಬ ಆದರ್ಶ ವ್ಯಕ್ತಿಗಳ ಜೀವನ ಚರಿತ್ರೆ, ಸಮಾಜಕ್ಕೆ ಕೊಡುಗೆ
ನೀಡಿದವರ ಬಗ್ಗೆ ವಿವಿಧ ಕ್ಷೇತ್ರಗಳ ಸಾಧಕರು ಮಾತನಾಡುತ್ತಾರೆ. ಆದರೆ, ಅ.17ರಂದು ರಾಮಾಯಣ ಮಹಾಕಾವ್ಯದ ಕರ್ತ್ಯ ‘ಮಹರ್ಷಿ ವಾಲ್ಮೀಕಿ ಜಯಂತಿ’ ಇದ್ದರೂ ಅವರ ಬಗ್ಗೆ ಈ ಕಾರ್ಯಕ್ರಮದಲ್ಲಿ ಯಾವುದೇ ಮಾಹಿತಿ ನೀಡದೇ ಹೋಗಿದ್ದು, ಕೇಳುಗರಲ್ಲಿ ಬೇಸರ ಮೂಡಿಸಿದೆ. ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ, ಮಹಾವೀರ ಜಯಂತಿ, ಬಸವ ಜಯಂತಿ, ಗಾಂಧಿ ಜಯಂತಿ, ಕೆಂಪೇಗೌಡರ ಜಯಂತಿ ಹೀಗೆ ಎಲ್ಲ ಜಯಂತಿಗಳಲ್ಲೂ ಅವರ ಬಗ್ಗೆ ಮಾಹಿತಿ ನೀಡುವ ಆಕಾಶವಾಣಿಯವರು ವಾಲ್ಮೀಕಿಯನ್ನು ಮಾತ್ರ ಮರೆತದ್ದು ಏಕೆ? ಇದು ಒಂದು ಸಮುದಾಯಕ್ಕೆ ಮಾಡಿದ ಅವಮಾನವಲ್ಲವೇ? ಆಕಾಶವಾಣಿಯ ನಿರ್ದೇಶಕರು ಮುಂದಿನ ದಿನಗಳಲ್ಲಾದರೂ ಹೀಗಾಗದಂತೆ ಎಚ್ಚರವಹಿಸಿ ಮಹನೀಯರ ಜಯಂತಿಗಳ ಬಗ್ಗೆ ಮಾಹಿತಿ ನೀಡುವಂತಾಗಲಿ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಸಜೀವ…
ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…
೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…
ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…
ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…
- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು…