ಓದುಗರ ಪತ್ರ
ರಾಜ್ಯದ 18 ಆಕಾಶವಾಣಿ ಕೇಂದ್ರಗಳ ಪ್ರತಿದಿನ ಬೆಳಿಗ್ಗೆ 6.10ಕ್ಕೆ 5 ನಿಮಿಷಗಳ ಕಾಲ ‘ಚಿಂತನ’ ಎಂಬ ವಿಶೇಷ ಕಾರ್ಯಕ್ರಮವನ್ನು ಪ್ರಸಾದ ಮಾಡುತ್ತಿದ್ದು, ಕೇಳುಗರಿಗೆ ಉಪಯುಕ್ತ ಮಾಹಿತಿ ನೀಡುತ್ತಿವೆ.
ಈ ಕಾರ್ಯಕ್ರಮದಲ್ಲಿ ಅಂದಿನ ದಿನದ ವಿಶೇಷತ, ಹಬ್ಬ ಆದರ್ಶ ವ್ಯಕ್ತಿಗಳ ಜೀವನ ಚರಿತ್ರೆ, ಸಮಾಜಕ್ಕೆ ಕೊಡುಗೆ
ನೀಡಿದವರ ಬಗ್ಗೆ ವಿವಿಧ ಕ್ಷೇತ್ರಗಳ ಸಾಧಕರು ಮಾತನಾಡುತ್ತಾರೆ. ಆದರೆ, ಅ.17ರಂದು ರಾಮಾಯಣ ಮಹಾಕಾವ್ಯದ ಕರ್ತ್ಯ ‘ಮಹರ್ಷಿ ವಾಲ್ಮೀಕಿ ಜಯಂತಿ’ ಇದ್ದರೂ ಅವರ ಬಗ್ಗೆ ಈ ಕಾರ್ಯಕ್ರಮದಲ್ಲಿ ಯಾವುದೇ ಮಾಹಿತಿ ನೀಡದೇ ಹೋಗಿದ್ದು, ಕೇಳುಗರಲ್ಲಿ ಬೇಸರ ಮೂಡಿಸಿದೆ. ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ, ಮಹಾವೀರ ಜಯಂತಿ, ಬಸವ ಜಯಂತಿ, ಗಾಂಧಿ ಜಯಂತಿ, ಕೆಂಪೇಗೌಡರ ಜಯಂತಿ ಹೀಗೆ ಎಲ್ಲ ಜಯಂತಿಗಳಲ್ಲೂ ಅವರ ಬಗ್ಗೆ ಮಾಹಿತಿ ನೀಡುವ ಆಕಾಶವಾಣಿಯವರು ವಾಲ್ಮೀಕಿಯನ್ನು ಮಾತ್ರ ಮರೆತದ್ದು ಏಕೆ? ಇದು ಒಂದು ಸಮುದಾಯಕ್ಕೆ ಮಾಡಿದ ಅವಮಾನವಲ್ಲವೇ? ಆಕಾಶವಾಣಿಯ ನಿರ್ದೇಶಕರು ಮುಂದಿನ ದಿನಗಳಲ್ಲಾದರೂ ಹೀಗಾಗದಂತೆ ಎಚ್ಚರವಹಿಸಿ ಮಹನೀಯರ ಜಯಂತಿಗಳ ಬಗ್ಗೆ ಮಾಹಿತಿ ನೀಡುವಂತಾಗಲಿ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…