Andolana originals

ಓದುಗರ ಪತ್ರ: ವಾಲ್ಮೀಕಿಯನ್ನು ಮರೆತದ್ದೇಕೆ?

ರಾಜ್ಯದ 18 ಆಕಾಶವಾಣಿ ಕೇಂದ್ರಗಳ ಪ್ರತಿದಿನ ಬೆಳಿಗ್ಗೆ 6.10ಕ್ಕೆ 5 ನಿಮಿಷಗಳ ಕಾಲ ‘ಚಿಂತನ’ ಎಂಬ ವಿಶೇಷ ಕಾರ್ಯಕ್ರಮವನ್ನು ಪ್ರಸಾದ ಮಾಡುತ್ತಿದ್ದು, ಕೇಳುಗರಿಗೆ ಉಪಯುಕ್ತ ಮಾಹಿತಿ ನೀಡುತ್ತಿವೆ.

ಈ ಕಾರ್ಯಕ್ರಮದಲ್ಲಿ ಅಂದಿನ ದಿನದ ವಿಶೇಷತ, ಹಬ್ಬ ಆದರ್ಶ ವ್ಯಕ್ತಿಗಳ ಜೀವನ ಚರಿತ್ರೆ, ಸಮಾಜಕ್ಕೆ ಕೊಡುಗೆ

ನೀಡಿದವರ ಬಗ್ಗೆ ವಿವಿಧ ಕ್ಷೇತ್ರಗಳ ಸಾಧಕರು ಮಾತನಾಡುತ್ತಾರೆ. ಆದರೆ, ಅ.17ರಂದು ರಾಮಾಯಣ ಮಹಾಕಾವ್ಯದ ಕರ್ತ್ಯ ‘ಮಹರ್ಷಿ ವಾಲ್ಮೀಕಿ ಜಯಂತಿ’ ಇದ್ದರೂ ಅವರ ಬಗ್ಗೆ ಈ ಕಾರ್ಯಕ್ರಮದಲ್ಲಿ ಯಾವುದೇ ಮಾಹಿತಿ ನೀಡದೇ ಹೋಗಿದ್ದು, ಕೇಳುಗರಲ್ಲಿ ಬೇಸರ ಮೂಡಿಸಿದೆ. ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ, ಮಹಾವೀರ ಜಯಂತಿ, ಬಸವ ಜಯಂತಿ, ಗಾಂಧಿ ಜಯಂತಿ, ಕೆಂಪೇಗೌಡರ ಜಯಂತಿ ಹೀಗೆ ಎಲ್ಲ ಜಯಂತಿಗಳಲ್ಲೂ ಅವರ ಬಗ್ಗೆ ಮಾಹಿತಿ ನೀಡುವ ಆಕಾಶವಾಣಿಯವರು ವಾಲ್ಮೀಕಿಯನ್ನು ಮಾತ್ರ ಮರೆತದ್ದು ಏಕೆ? ಇದು ಒಂದು ಸಮುದಾಯಕ್ಕೆ ಮಾಡಿದ ಅವಮಾನವಲ್ಲವೇ? ಆಕಾಶವಾಣಿಯ ನಿರ್ದೇಶಕರು ಮುಂದಿನ ದಿನಗಳಲ್ಲಾದರೂ ಹೀಗಾಗದಂತೆ ಎಚ್ಚರವಹಿಸಿ ಮಹನೀಯರ ಜಯಂತಿಗಳ ಬಗ್ಗೆ ಮಾಹಿತಿ ನೀಡುವಂತಾಗಲಿ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

9 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

10 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

11 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

11 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

12 hours ago