ಮಹಿಳೆಯೊಬ್ಬರ ಅಪಹರಣ ಮತ್ತು ಅತ್ಯಾಚಾರ ಆರೋಪದಡಿ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಇರಬರ ದೇವಸ್ಥಾನಗಳಿಗೆಲ್ಲ ಭೇಟಿ ನೀಡುತ್ತಿದ್ದಾರೆ. ಅವರು ಇನ್ನೂ ಆರೋಪಿ, ಅಲ್ಲದೆ, ಅವರ ಮೇಲಿರುವುದು ಗಂಭೀರ ಆರೋಪ.ಹೀಗಿರುವಾಗ ರೇವಣ್ಣ ಅವರು ದೇವಾಲಯವನ್ನು ಪ್ರವೇಶಿಸುವುದರಿಂದ, ಅದರ ಘನತೆಗೆ ಧಕ್ಕೆಯಾಗುತ್ತದೆ. ದೇಗುಲಗಳನ್ನು ಹಿಂದೂ ಧರ್ಮದ ಸಂಸ್ಕಾರದ ಪ್ರತೀಕವಾಗಿ ಪರಿಗಣಿಸಲಾಗಿದೆ. ಅತ್ಯಂತ ಹೀನಾಯ ಆರೋಪ ಹೊತ್ತಿರುವ ರೇವಣ್ಣ ಅವರನ್ನು ದೇವಾಲಯದ ಆಡಳಿತ ಮಂಡಳಿಗಳು, ದೇವರ ದರ್ಶನಕ್ಕೆ ಅವಕಾಶ ನೀಡುತ್ತಿರುವುದು ಎಷ್ಟು ಸರಿ? ಅವರು ಚಾಮುಂಡಿಬೆಟ್ಟ, ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯ, ಧರ್ಮಸ್ಥಳ ಶ್ರೀ ಮಂಜುನಾಥ ದೇಗುಲ… ಹೀಗೆ ಕಣ್ಣಿಗೆ ಕಂಡ, ಕಿವಿಗೆ ಕೇಳಿಸಿದ ಎಲ್ಲ ದೇವಸ್ಥಾನಗಳಿಗೂ ಲಗ್ಗೆ ಇಡುತ್ತಿದ್ದಾರೆ. ಯಾವ ದೇವಸ್ಥಾನದವರೂ ರೇವಣ್ಣ ಅವರನ್ನು ನಿರ್ಬಂಧಿಸಿಲ್ಲ. ಆದರೆ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಯನ್ನು ಎರಡೂ ಕೈಚಾಚಿ ಬರಮಾಡಿಕೊಳ್ಳುತ್ತಿರುವುದು ವಿಪರ್ಯಾಸ. ಅವರು ಶಾಸಕರು ಎಂದ ಮಾತ್ರಕ್ಕೆ ಎಂತಹ ದೊಡ್ಡ ಮಟ್ಟದ ತಪ್ಪು ಮಾಡಿದ್ದರೂ ಲೆಕ್ಕಕ್ಕೆ ಇರುವುದಿಲ್ಲವೇ? ಅಲ್ಲದೆ, ಹಿಂದೂ ಧಾರ್ಮಿಕ ದೇವಾಲಯಗಳು ತಪ್ಪು ಮಾಡಿದವರಿಗೆ ಪ್ರವೇಶ ನೀಡುವುದರಿಂದ ಅಶುದ್ಧವಾಗುತ್ತವೆ. ಯಾವ ತಪ್ಪು ಮಾಡದಿದ್ದರೂ ತಳ ಜಾತಿಯವರು ದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿಬಿಟ್ಟರೆ, ಶುದ್ದೀಕರಣ ಮಾಡುತ್ತಾರೆ. ಗುರುತರ ಆರೋಪ ಹೊತ್ತಿರುವ ರೇವಣ್ಣ ಅವರಿಗೆ ಮಣೆ ಹಾಕುತ್ತಿರುವುದು. ಹಿಂದೂ ಧರ್ಮದ ಒಳಗಿನ ತಾರತಮ್ಯವನ್ನು ಎತ್ತಿಹಿಡಿದಿದೆ. ರೇವಣ್ಣ ಅವರು ದೇವಸ್ಥಾನಗಳಿಗೆ ಭೇಟಿ ನೀಡುವುದಕ್ಕೆ ಅವಕಾಶ ಕೊಡಬಾರದು.
-ಎಂ.ವಿ.ಇಶಾನ್ವಿ, ಕೆಎಚ್ಬಿ ಕಾಲೋನಿ, ನಂಜನಗೂಡು
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…