Andolana originals

ರೇವಣ್ಣಗೆ ದೇಗುಲ ಪ್ರವೇಶಕ್ಕೆ ಅವಕಾಶ ಸರಿಯೇ?

ಮಹಿಳೆಯೊಬ್ಬರ ಅಪಹರಣ ಮತ್ತು ಅತ್ಯಾಚಾರ ಆರೋಪದಡಿ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಇರಬರ ದೇವಸ್ಥಾನಗಳಿಗೆಲ್ಲ ಭೇಟಿ ನೀಡುತ್ತಿದ್ದಾರೆ. ಅವರು ಇನ್ನೂ ಆರೋಪಿ, ಅಲ್ಲದೆ, ಅವರ ಮೇಲಿರುವುದು ಗಂಭೀರ ಆರೋಪ.ಹೀಗಿರುವಾಗ ರೇವಣ್ಣ ಅವರು ದೇವಾಲಯವನ್ನು ಪ್ರವೇಶಿಸುವುದರಿಂದ, ಅದರ ಘನತೆಗೆ ಧಕ್ಕೆಯಾಗುತ್ತದೆ. ದೇಗುಲಗಳನ್ನು ಹಿಂದೂ ಧರ್ಮದ ಸಂಸ್ಕಾರದ ಪ್ರತೀಕವಾಗಿ ಪರಿಗಣಿಸಲಾಗಿದೆ. ಅತ್ಯಂತ ಹೀನಾಯ ಆರೋಪ ಹೊತ್ತಿರುವ ರೇವಣ್ಣ ಅವರನ್ನು ದೇವಾಲಯದ ಆಡಳಿತ ಮಂಡಳಿಗಳು, ದೇವರ ದರ್ಶನಕ್ಕೆ ಅವಕಾಶ ನೀಡುತ್ತಿರುವುದು ಎಷ್ಟು ಸರಿ? ಅವರು ಚಾಮುಂಡಿಬೆಟ್ಟ, ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯ, ಧರ್ಮಸ್ಥಳ ಶ್ರೀ ಮಂಜುನಾಥ ದೇಗುಲ… ಹೀಗೆ ಕಣ್ಣಿಗೆ ಕಂಡ, ಕಿವಿಗೆ ಕೇಳಿಸಿದ ಎಲ್ಲ ದೇವಸ್ಥಾನಗಳಿಗೂ ಲಗ್ಗೆ ಇಡುತ್ತಿದ್ದಾರೆ. ಯಾವ ದೇವಸ್ಥಾನದವರೂ ರೇವಣ್ಣ ಅವರನ್ನು ನಿರ್ಬಂಧಿಸಿಲ್ಲ. ಆದರೆ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಯನ್ನು ಎರಡೂ ಕೈಚಾಚಿ ಬರಮಾಡಿಕೊಳ್ಳುತ್ತಿರುವುದು ವಿಪರ್ಯಾಸ. ಅವರು ಶಾಸಕರು ಎಂದ ಮಾತ್ರಕ್ಕೆ ಎಂತಹ ದೊಡ್ಡ ಮಟ್ಟದ ತಪ್ಪು ಮಾಡಿದ್ದರೂ ಲೆಕ್ಕಕ್ಕೆ ಇರುವುದಿಲ್ಲವೇ? ಅಲ್ಲದೆ, ಹಿಂದೂ ಧಾರ್ಮಿಕ ದೇವಾಲಯಗಳು ತಪ್ಪು ಮಾಡಿದವರಿಗೆ ಪ್ರವೇಶ ನೀಡುವುದರಿಂದ ಅಶುದ್ಧವಾಗುತ್ತವೆ. ಯಾವ ತಪ್ಪು ಮಾಡದಿದ್ದರೂ ತಳ ಜಾತಿಯವರು ದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿಬಿಟ್ಟರೆ, ಶುದ್ದೀಕರಣ ಮಾಡುತ್ತಾರೆ. ಗುರುತರ ಆರೋಪ ಹೊತ್ತಿರುವ ರೇವಣ್ಣ ಅವರಿಗೆ ಮಣೆ ಹಾಕುತ್ತಿರುವುದು. ಹಿಂದೂ ಧರ್ಮದ ಒಳಗಿನ ತಾರತಮ್ಯವನ್ನು ಎತ್ತಿಹಿಡಿದಿದೆ. ರೇವಣ್ಣ ಅವರು ದೇವಸ್ಥಾನಗಳಿಗೆ ಭೇಟಿ ನೀಡುವುದಕ್ಕೆ ಅವಕಾಶ ಕೊಡಬಾರದು.
-ಎಂ.ವಿ.ಇಶಾನ್ವಿ, ಕೆಎಚ್‌ಬಿ ಕಾಲೋನಿ, ನಂಜನಗೂಡು

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago